ಹಿರೆಕೇರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ 
ರಾಜ್ಯ

ಹಿರೆಕೇರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ 

ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ‌ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು‌ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. 

ಹಾವೇರಿ: ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ‌ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು‌ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. 

ಇಂದು ಹಿರೇಕೆರೂರಿನ ಕ್ರೀಡಾಂಗಣದಲ್ಲಿ, ಹಿರೇಕೆರೂರು ಹಾಗೂ ರೆಟ್ಟಿಹಳ್ಳಿ ತಾಲೂಕಿನಲ್ಲಿನ ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ 85.19ಕೋಟಿ ವೆಚ್ಚದಲ್ಲಿ 20 ಕಾಮಗಾರಿ, ಜಲಸಂಪನ್ಮೂಲ ಹಾಗೂ ನೀರಾವರಿ ನಿಗಮದಿಂದ 25 ಕೋಟಿ ವೆಚ್ಚದಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಕಟ್ ಕವರ್ (ಆರ್ಚ ಟೈಪ್ ) ನಿರ್ಮಾಣ, ಪಂಚಾಯಿತ್ ರಾಜ್ಯ ಇಂಜಿನೀಯರಿಂಗ್ ಇಲಾಖೆಯಿಂದ‌ 9.45 ಕೋಟಿ ವೆಚ್ಚದ 13 ಕಾಮಗಾರಿಗಳು, ಸಮಾಜಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಇಲಾಖೆಯಿಂದ 1.56 ಕೋಟಿ ವೆಚ್ಚದಲ್ಲಿ ಒಂದು ಕಾಮಾಗರಿಗೆ ಶಂಕು‌ಸ್ಥಾಪನೆ ಸಂಸ್ಥಾಪನೆ ಮಾಡಲಾಗಿದೆ‌. ಈ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು‌ ಹೇಳಿದರು.

ಗೃಹ, ಸಹಕಾರ ಮತ್ತು ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಹಾವೇರಿ ಸಂಸದ ಶಿವಕುಮಾರ ಉದಾಸಿ, ಶಿವಮೊಗ್ಗ ಸಂಸದ.ಬಿ.ವೈ.ರಾಘವೇಂದ್ರ, ಹಿರೇಕೆರೂರು ಜಿ.ಪಂ.ಸದಸ್ಯೆ ಗಿರಿಜಮ್ಮ.ಹ ಬ್ಯಾಲದಳ್ಳಿ, ತಾ.ಪಂ.ಅಧ್ಯಕ್ಷ ರಾಜು.ಗ ಬಣಕಾರ, ಉಪಾಧ್ಯಕ್ಷ ಕವಿತಾ ಕ. ಬಿದರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್‌ ಸೇರಿದಂತೆ ಹಿರಿಯ ಅಧಿಕಾರಿಗಳು, ಸ್ಥಳೀಯ ನಾಯಕರು ಉಪಸ್ಥಿರಿದ್ದರು. ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತತ ಪಡಿಸಿದರು.ಅಪರ ಜಿಲ್ಲಾಧಿಕಾರಿ ಎಲ್ ತಿಪ್ಪೇಸ್ವಾಮಿ ಸ್ವಾಗತಿಸಿದರು.    

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT