ಸಂಗ್ರಹ ಚಿತ್ರ 
ರಾಜ್ಯ

ಗದಗದಲ್ಲೊಂದು 'ಮರ್ಯಾದಾ ಹತ್ಯೆ'-ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳ ಬರ್ಬರ ಕೊಲೆ!

ಪೋಷಕರ ವಿರೋಧದ ನಡುವೆಯೂ ನೂರಾರು ಕನಸು ಕಟ್ಟಿಕೊಂಡು ಪ್ರೀತಿಸಿ ವಿವಾಹವಾಗಿದ್ದ ಯುವಜೋಡಿಯೊಂದು ರಕ್ತದ ಮಡುವಿನಲ್ಲಿ ಬರ್ಬರವಾಗಿ ಕೊಲೆಯಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗ: ಪೋಷಕರ ವಿರೋಧದ ನಡುವೆಯೂ ನೂರಾರು ಕನಸು ಕಟ್ಟಿಕೊಂಡು ಪ್ರೀತಿಸಿ ವಿವಾಹವಾಗಿದ್ದ ಯುವಜೋಡಿಯೊಂದು ರಕ್ತದ ಮಡುವಿನಲ್ಲಿ ಬರ್ಬರವಾಗಿ ಕೊಲೆಯಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗದ ಗಜೇಂದ್ರ ಗಡ ತಾಲೂಕು ಲಕ್ಕಲಹಟ್ಟಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ರಮೇಶ್ ಮಾದರ್ (29), ಗಂಗಮ್ಮ (23) ಎಂಬ ದಂಪತಿಗಳು ಹತ್ಯೆಗೀಡಾಗಿದ್ದಾರೆ. ಇಬ್ಬರ ಜಾತಿ ಬೇರೆ ಬೇರೆ ಎಂಬ ಕಾರಣಕ್ಕೆ ಪೋಷಕರಿಂದ ಈ ಪ್ರೇಮಿಗಳ ವಿವಾಹಕ್ಕೆ ವಿರೋಧವಿತ್ತು. ಆದರೆ ಅದಕ್ಕೆ ಸೊಪ್ಪು ಹಾಕದ ಈ ಜೋಡಿ ಎಲ್ಲವನ್ನೂ ಎದುರಿಸಿ ದಾಂಪತ್ಯ ಜೀವನಕ್ಕೆ ಅಡಿ ಇಟ್ಟಿದ್ದರು. ಆದರೆ ಇದರಿಂದ ಆಕ್ರೋಶಗೊಂಡ ಗಂಗಮ್ಮ ಸಾಂಬಂಧಿಗಳು ಲಕ್ಕಲಹಟ್ಟಿ ಗ್ರಾಮಕ್ಕೆ ನುಗ್ಗಿ ನವದಂಪತಿಗಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಕಲ್ಲು ಹಾಗೂ ದೊಣ್ನೆಯನ್ನು ಬಳಸಿ ಯುವತಿ ಗಂಗಮ್ಮಳ ಸಂಬಂಧಿಗಳು ಈ ಕೃತ್ಯ ಎಸಗಿದ್ದಾರೆ. 

ಘಟನೆ ಕುರಿತು ಮಾಹಿತಿ ಪಡೆದ ಗಜೇಂದ್ರಗಡ ಪೋಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಾದ ಶಿವಪ್ಪ, ರವಿ, ರಮೇಶ್ ಎಂಬುವವರನ್ನು ಈಗಾಗಲೇ ಬಂಧಿಸಿದ್ದು ಇನ್ನೊರ್ವ ಆರೋಪಿ ರಮೇಶ್​ಗಾಗಿ ಶೋಧಕಾರ್ಯ ಮುಂದುವರಿದಿದೆ. ಮಗ, ಸೊಸೆಯನ್ನು ಕಳೆದುಕೊಂಡ ರಮೇಶ್ ಪೋಷಕರ ಆಕ್ರಂದನ ಮಾತ್ರ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT