ಸಂಗ್ರಹ ಚಿತ್ರ 
ರಾಜ್ಯ

ಗದಗದಲ್ಲೊಂದು 'ಮರ್ಯಾದಾ ಹತ್ಯೆ'-ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳ ಬರ್ಬರ ಕೊಲೆ!

ಪೋಷಕರ ವಿರೋಧದ ನಡುವೆಯೂ ನೂರಾರು ಕನಸು ಕಟ್ಟಿಕೊಂಡು ಪ್ರೀತಿಸಿ ವಿವಾಹವಾಗಿದ್ದ ಯುವಜೋಡಿಯೊಂದು ರಕ್ತದ ಮಡುವಿನಲ್ಲಿ ಬರ್ಬರವಾಗಿ ಕೊಲೆಯಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗ: ಪೋಷಕರ ವಿರೋಧದ ನಡುವೆಯೂ ನೂರಾರು ಕನಸು ಕಟ್ಟಿಕೊಂಡು ಪ್ರೀತಿಸಿ ವಿವಾಹವಾಗಿದ್ದ ಯುವಜೋಡಿಯೊಂದು ರಕ್ತದ ಮಡುವಿನಲ್ಲಿ ಬರ್ಬರವಾಗಿ ಕೊಲೆಯಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗದ ಗಜೇಂದ್ರ ಗಡ ತಾಲೂಕು ಲಕ್ಕಲಹಟ್ಟಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ರಮೇಶ್ ಮಾದರ್ (29), ಗಂಗಮ್ಮ (23) ಎಂಬ ದಂಪತಿಗಳು ಹತ್ಯೆಗೀಡಾಗಿದ್ದಾರೆ. ಇಬ್ಬರ ಜಾತಿ ಬೇರೆ ಬೇರೆ ಎಂಬ ಕಾರಣಕ್ಕೆ ಪೋಷಕರಿಂದ ಈ ಪ್ರೇಮಿಗಳ ವಿವಾಹಕ್ಕೆ ವಿರೋಧವಿತ್ತು. ಆದರೆ ಅದಕ್ಕೆ ಸೊಪ್ಪು ಹಾಕದ ಈ ಜೋಡಿ ಎಲ್ಲವನ್ನೂ ಎದುರಿಸಿ ದಾಂಪತ್ಯ ಜೀವನಕ್ಕೆ ಅಡಿ ಇಟ್ಟಿದ್ದರು. ಆದರೆ ಇದರಿಂದ ಆಕ್ರೋಶಗೊಂಡ ಗಂಗಮ್ಮ ಸಾಂಬಂಧಿಗಳು ಲಕ್ಕಲಹಟ್ಟಿ ಗ್ರಾಮಕ್ಕೆ ನುಗ್ಗಿ ನವದಂಪತಿಗಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಕಲ್ಲು ಹಾಗೂ ದೊಣ್ನೆಯನ್ನು ಬಳಸಿ ಯುವತಿ ಗಂಗಮ್ಮಳ ಸಂಬಂಧಿಗಳು ಈ ಕೃತ್ಯ ಎಸಗಿದ್ದಾರೆ. 

ಘಟನೆ ಕುರಿತು ಮಾಹಿತಿ ಪಡೆದ ಗಜೇಂದ್ರಗಡ ಪೋಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಾದ ಶಿವಪ್ಪ, ರವಿ, ರಮೇಶ್ ಎಂಬುವವರನ್ನು ಈಗಾಗಲೇ ಬಂಧಿಸಿದ್ದು ಇನ್ನೊರ್ವ ಆರೋಪಿ ರಮೇಶ್​ಗಾಗಿ ಶೋಧಕಾರ್ಯ ಮುಂದುವರಿದಿದೆ. ಮಗ, ಸೊಸೆಯನ್ನು ಕಳೆದುಕೊಂಡ ರಮೇಶ್ ಪೋಷಕರ ಆಕ್ರಂದನ ಮಾತ್ರ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT