ಶ್ರೀರಾಮುಲು 
ರಾಜ್ಯ

ಆರೋಗ್ಯ-ವೈದ್ಯಕೀಯ ಶಿಕ್ಷಣ ಇಲಾಖೆ ನಡುವಿನ ವೇತನ ತಾರತಮ್ಯ ಶೀಘ್ರದಲ್ಲೇ ಪರಿಹಾರ: ಶ್ರೀರಾಮುಲು

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ವೇತನ ತಾರತಮ್ಯ ಹಾಗೂ ಸಮನ್ವಯದ ಕೊರತೆಯನ್ನು ಶೀಘ್ರದಲ್ಲೇ ಈ ಸಮಸ್ಯೆಯನ್ನು ಸರಿಪಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ವೇತನ ತಾರತಮ್ಯ ಹಾಗೂ ಸಮನ್ವಯದ ಕೊರತೆಯನ್ನು ಶೀಘ್ರದಲ್ಲೇ ಈ ಸಮಸ್ಯೆಯನ್ನು ಸರಿಪಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. 

ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ನಡೆದ 2018-19ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ವೇತನ ತಾರತಮ್ಯ ಮತ್ತು ಸಮನ್ವಯದ ಕೊರತೆ ಇದ್ದು, ಇದರ ಪರಿಣಾಮ ರೋಗಿಗಳ ಮೇಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಒಂದು ಸಚಿವ ಸ್ಥಾನ ಹೆಚ್ಚಿಸಲೆಂದು ಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಬೇರೆ ಬೇರೆ ಎಂಬಂತಾಗಿವೆ. ಆದರೆ ಜಿಲ್ಲಾಸ್ಪತ್ರೆಗಳನ್ನು ಆಯಾ ಜಿಲ್ಲೆಗಳ ವೈದ್ಯಕೀಯ ಕಾಲೇಜುಗಳ ಜೊತೆಗೆ ಸೇರಿಸಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಒಂದೇ ಕಡೆ ಕೆಲಸ ಮಾಡುವ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯಕೀಯ ಕಾಲೇಜು ಸಿಬ್ಬಂದಿ ನಡುವೆ ಸಾಕಷ್ಟು ವೇತನ ತಾರತಮ್ಯ ಇದೆ. 

ಈ ರೀತಿಯ ತಾರತಮ್ಯದಿಂದ ವೈದ್ಯರು ಮತ್ತು ಸಿಬ್ಬಂದಿಯಲ್ಲಿ ಭಾರತ-ಪಾಕಿಸ್ತಾನದ ಹಾಗೆ ಕಂದಕ ಸೃಷ್ಟಿಯಾಗುತ್ತಿದೆ. ಇದರ ನೇರ ಪರಿಣಾಮ ರೋಗಿಗಳ ಮೇಲಾಗುತ್ತಿದೆ. ವೈದ್ಯಕೀಯ ಕಾಲೇಜು ಡೀನ್ ಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಾಗುತ್ತಿದ್ದು, ಇದರಿಂದ ಆರೋಗ್ಯ ಕಾರ್ಯಕ್ರಮಗಳ ಜಾರಿಗೆ ಸಮಸ್ಯೆಗಾತ್ತಿದೆ. ಶೀಘ್ರದಲ್ಲಿಯೇ ಈ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT