ತೇಜಸ್ವಿ ಸೂರ್ಯ, ಆರ್. ಅಶೋಕ್ ಮತ್ತಿತರರು 
ರಾಜ್ಯ

ಮೂರು ತಿಂಗಳಲ್ಲಿ ಬನಶಂಕರಿ ಸ್ಕೈವಾಕ್ ಸಾರ್ವಜನಿಕರ ಬಳಕೆಗೆ ಲಭ್ಯ- ತೇಜಸ್ವಿ ಸೂರ್ಯ

ರಾಜಧಾನಿ ಬೆಂಗಳೂರಿನ  ದಕ್ಷಿಣದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಬನಶಂಕರಿಯಲ್ಲಿ ದಿನಂಪ್ರತಿ ಸಾವಿರಾರು ಸಾರ್ವಜನಿಕರು ಸಂಚಾರ ದಟ್ಟಣೆಯಿಂದ ನಲುಗಿ ಹೋಗಿದ್ದಾರೆ. 

ಬೆಂಗಳೂರು: ರಾಜಧಾನಿ ಬೆಂಗಳೂರಿನ  ದಕ್ಷಿಣದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಬನಶಂಕರಿಯಲ್ಲಿ ದಿನಂಪ್ರತಿ ಸಾವಿರಾರು ಸಾರ್ವಜನಿಕರು ಸಂಚಾರ ದಟ್ಟಣೆಯಿಂದ ನಲುಗಿ ಹೋಗಿದ್ದಾರೆ. 

ಮೆಟ್ರೋ ನಿಲ್ದಾಣ ಮತ್ತು ಬಸ್ ನಿಲ್ದಾಣದ ನಡುವೆ ಸ್ಕೈವಾಕ್ ನಿರ್ಮಿಸಿದರೆ ಇದಕ್ಕೆ ಪರಿಹಾರ ಕಲ್ಪಿಸಲು ಸಾಧ್ಯ ಎಂದು ಮನಗಂಡಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕಂದಾಯ ಸಚಿವ ಆರ್ ಅಶೋಕ್, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಅವರೊಂದಿಗೆ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬನಶಂಕರಿ ಬಸ್ ನಿಲ್ದಾಣದ ಬಳಿ ಉಂಟಾಗಿರುವ ಸಂಚಾರ ದಟ್ಟಣೆ ನಿವಾರಿಸಲು ಸ್ಕೈವಾಕ್ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಈ ಕಾಮಗಾರಿ ಮೂರು ತಿಂಗಳ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಬನಶಂಕರಿ ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳ ಮಧ್ಯೆ ನೇರವಾಗಿ ಸ್ಕೈವಾಕ್ ನಿರ್ಮಾಣ ಮಾಡಿದಲ್ಲಿ ಪ್ರಯಾಣಿಕರಿಗೆ ಹಾಗೂ ಪಾದಚಾರಿಗಳಿಗೆ ಬಹಳಷ್ಟು ಪ್ರಯೋಜನವಾಗಲಿದ್ದು ,ಈ ಕೂಡಲೇ ಕಾಮಗಾರಿ ಆರಂಭಿಸಿ ಮುಂದಿನ ಮೂರು ತಿಂಗಳ ಒಳಗಾಗಿ ಸಾರ್ವಜನಿಕ ಸೇವೆಗೆ ಮುಕ್ತವಾಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

  ಸ್ಕೈವಾಕ್ ನಿರ್ಮಾಣಕ್ಕೆ ಅನಗತ್ಯ ವಿಳಂಬ ಮಾಡಿ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ದ ಕಿಡಿಕಾರಿದ ಕಂದಾಯ ಸಚಿವ ಆರ್ ಅಶೋಕ್, ಅಂತಹ ಅಧಿಕಾರಿಗಳನ್ನು ಅಮಾನತು ಮಾಡುವ ಎಚ್ಚರಿಕೆ ನೀಡಿದರು.

 ಸ್ಕೈವಾಕ್ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದ್ದು ಇದೊಂದು ಪ್ರಯೋಗಿಕ ಯೋಜನೆಯಾಗಿ ರೂಪುಗೊಳ್ಳಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT