ಸಿದ್ದರಾಮಯ್ಯ 
ರಾಜ್ಯ

ಖಾಸಗಿ ಟಿಪ್ಪು ಜಯಂತಿ ಆಚರಣೆ ಮಾಡಲು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ

ನ್ಯಾಯಾಲಯವೇ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆಗೆ ಅಡ್ಡಿಯಿಲ್ಲ ಎಂದಿರುವಾಗ ಇವರದೇನು ಸಮಸ್ಯೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಮೈಸೂರು: ನ್ಯಾಯಾಲಯವೇ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆಗೆ ಅಡ್ಡಿಯಿಲ್ಲ ಎಂದಿರುವಾಗ ಇವರದೇನು ಸಮಸ್ಯೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಟಿಪ್ಪು ಜಯಂತಿ ಆಚರಣೆ ಮಾಡಿದರೆ, ಎಲ್ಲಿಯೂ ಗಲಾಟೆಗಳಾಗುವುದಿಲ್ಲ. ಗಲಾಟೆ ಮಾಡುತ್ತಾರೆ ಎಂದರೆ ಅದು ಆರ್'ಎಸ್ಎಸ್'ನವರು ಮಾತ್ರ. ಕಳೆದ ಮೂರು ವರ್ಷಗಳು ನಾವು ಆಚರಣೆ ಮಾಡಲಿಲ್ಲವೇ? ಆಗ ಕೊಡಗು ಬಿಟ್ಟರೆ ಬೇರೆಲ್ಲೂ ಗಲಾಟೆ ನಡೆದಿರಲಿಲ್ಲ. ಕೊಡಗಿನ ಗಲಾಟೆಯನ್ನೂ ತಡೆಯಬಹುದಿತ್ತು. ಆದರೆ, ಪೊಲೀಸರ ಬೇಜವಾಬ್ದಾರಿತನದಿಂದ ಗಲಾಟೆಯಾಗಿತ್ತು ಎಂದು ಹೇಳಿದ್ದಾರೆ. 

ಇದೇ ವೇಳೆ ಬಿಎಸ್'ವೈ ಆಡಿಯೋ ಟೇಪ್ ಕುರಿತಂತೆ ಕಿಡಿಕಾಡಿರುವ ಅವರು, ಆಡಿಯೋದಲ್ಲಿ ಯಡಿಯೂರಪ್ಪ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ್ದಾರೆ. ಅಮಿತ್ ಶಾ ಅವರೇ ಆಪರೇಷನ್ ಕಮಲ ಮಾಡಿದ್ದಾರೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ಅಧಿಕಾರದಲ್ಲಿ ಮುಂದುವರೆಯಲು ಯಡಿಯೂರಪ್ಪ ಹಾಗೂ ಶಾಗೆ ಯಾವುದೇ ನೈತಿಕ ಹಕ್ಕಿಲ್ಲ. ಅನರ್ಹ ಶಾಸಕರ ವಿರುದ್ಧದ ಕಾನೂನು ಹೋರಾಟವನ್ನು ಕಾಂಗ್ರೆಸ್ ಮುಂದುವರೆಸಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT