ಸಿದ್ದರಾಮಯ್ಯ 
ರಾಜ್ಯ

ಖಾಸಗಿ ಟಿಪ್ಪು ಜಯಂತಿ ಆಚರಣೆ ಮಾಡಲು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ

ನ್ಯಾಯಾಲಯವೇ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆಗೆ ಅಡ್ಡಿಯಿಲ್ಲ ಎಂದಿರುವಾಗ ಇವರದೇನು ಸಮಸ್ಯೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಮೈಸೂರು: ನ್ಯಾಯಾಲಯವೇ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆಗೆ ಅಡ್ಡಿಯಿಲ್ಲ ಎಂದಿರುವಾಗ ಇವರದೇನು ಸಮಸ್ಯೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಟಿಪ್ಪು ಜಯಂತಿ ಆಚರಣೆ ಮಾಡಿದರೆ, ಎಲ್ಲಿಯೂ ಗಲಾಟೆಗಳಾಗುವುದಿಲ್ಲ. ಗಲಾಟೆ ಮಾಡುತ್ತಾರೆ ಎಂದರೆ ಅದು ಆರ್'ಎಸ್ಎಸ್'ನವರು ಮಾತ್ರ. ಕಳೆದ ಮೂರು ವರ್ಷಗಳು ನಾವು ಆಚರಣೆ ಮಾಡಲಿಲ್ಲವೇ? ಆಗ ಕೊಡಗು ಬಿಟ್ಟರೆ ಬೇರೆಲ್ಲೂ ಗಲಾಟೆ ನಡೆದಿರಲಿಲ್ಲ. ಕೊಡಗಿನ ಗಲಾಟೆಯನ್ನೂ ತಡೆಯಬಹುದಿತ್ತು. ಆದರೆ, ಪೊಲೀಸರ ಬೇಜವಾಬ್ದಾರಿತನದಿಂದ ಗಲಾಟೆಯಾಗಿತ್ತು ಎಂದು ಹೇಳಿದ್ದಾರೆ. 

ಇದೇ ವೇಳೆ ಬಿಎಸ್'ವೈ ಆಡಿಯೋ ಟೇಪ್ ಕುರಿತಂತೆ ಕಿಡಿಕಾಡಿರುವ ಅವರು, ಆಡಿಯೋದಲ್ಲಿ ಯಡಿಯೂರಪ್ಪ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ್ದಾರೆ. ಅಮಿತ್ ಶಾ ಅವರೇ ಆಪರೇಷನ್ ಕಮಲ ಮಾಡಿದ್ದಾರೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ಅಧಿಕಾರದಲ್ಲಿ ಮುಂದುವರೆಯಲು ಯಡಿಯೂರಪ್ಪ ಹಾಗೂ ಶಾಗೆ ಯಾವುದೇ ನೈತಿಕ ಹಕ್ಕಿಲ್ಲ. ಅನರ್ಹ ಶಾಸಕರ ವಿರುದ್ಧದ ಕಾನೂನು ಹೋರಾಟವನ್ನು ಕಾಂಗ್ರೆಸ್ ಮುಂದುವರೆಸಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT