ರಾಜ್ಯ

ಕರ್ತಾರ್ಪುರ ಕಾರಿಡಾರ್: ಪಾಕ್ ಆಹ್ವಾನ ತಿರಸ್ಕರಿಸಿದ ರವಿಶಂಕರ್ ಗುರೂಜಿ

Manjula VN

ಬೆಂಗಳೂರು: ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಫಾಟನಾ ಸಮಾರಂಭಕ್ಕೆ ಆಗಮಿಸುವಂತೆ ಪಾಕಿಸ್ತಾನ ನೀಡಿದ್ದ ಆಹ್ವಾನವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ತಿರಸ್ಕರಿಸಿದ್ದಾರೆ. 

ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಘಾಟನೆ ಮತ್ತು ಧಾರ್ಮಿಕ ಪ್ರವಾಸೋದ್ಯಮದ ಉತ್ತೇಜನವು ನಿಮ್ಮ ಹಿಂಸೆ ಮುಕ್ತ ಜಗತ್ತಿನ ನಿರ್ಮಾಣದ ಉದ್ದೇಶಕ್ಕೆ ಅನುಗುಣವಾಗಿದೆ ಎಂದು ಆಹ್ವಾನ ಪತ್ರಿಕೆಯಲ್ಲಿ ಪಾಕಿಸ್ತಾನ ಉಲ್ಲೇಖಿಸಿತ್ತು. 

ಆದರೆ, ಪಾಕಿಸ್ತಾನದ ಈ ಆಹ್ವಾನವನ್ನು ರವಿಶಂಕರ್ ಗುರೂಜಿಯವರು ತಿರಸ್ಕರಿಸಿದ್ದು, ಮುಂಗಡ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. 

SCROLL FOR NEXT