ಸಂಗ್ರಹ ಚಿತ್ರ 
ರಾಜ್ಯ

ಬೆಳೆವಿಮೆ ಹಣ ವಿತರಣೆಗಾಗಿ ಪ್ರಧಾನಿಗೆ ಪತ್ರ ಬರೆದ ರೈತ

ಅಡಿಕೆ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ ಹಣ ವಿತರಣೆಯಾಗಿಲ್ಲ. ಕಡಿಮೆ ಪರಿಹಾರ ಬಂದಿರುವ ರೈತರಿಗೆ ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಅಂಡಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಶಿರಸಿ: ಅಡಿಕೆ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ ಹಣ ವಿತರಣೆಯಾಗಿಲ್ಲ. ಕಡಿಮೆ ಪರಿಹಾರ ಬಂದಿರುವ ರೈತರಿಗೆ ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಅಂಡಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ನಿಗದಿಪಡಿಸಿದ ಮಾನದಂಡದ ಪ್ರಕಾರ ಅಡಿಕೆ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ ಹಣ ವಿತರಣೆಯಾಗಿಲ್ಲ. ಕಡಿಮೆ ಪರಿಹಾರ ಬಂದಿರುವ ರೈತರಿಗೆ ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ತಾಲೂಕಿನ ಅಂಡಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ರೈತ ಮಲ್ಲಸರ್ಜನ ಪಾಟೀಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 

ಜೊತೆಗೆ ಪಿಎಂಒ ಇಂಡಿಯಾ ಟ್ವೀಟ್ ಖಾತೆಗೆ ಇದನ್ನು ಲಗತ್ತಿಸಿದ್ದಾರೆ.  ‘ಸಂಘದ ಸದಸ್ಯರಲ್ಲಿ ಸುಮಾರು ೩೦೦ ರೈತರಿಗೆ, ಸರ್ಕಾರ ನಿರ್ಧರಿಸಿದ ಮಾನದಂಡದನ್ವಯ ವಿಮೆ ಹಣ ಜಮಾ ಆಗಿಲ್ಲ. ನಿಯಮದಂತೆ ಅಡಿಕೆಗೆ ಒಂದು ಹೆಕ್ಟೇರ್‌ಗೆ ೩೮,೩೮೧ ಪರಿಹಾರ ಬರಬೇಕು. ಆದರೆ. ರೈತರಿಗೆ ಕೇವಲ ೧೩,೩೩೦ ಅಷ್ಟೇ ಜಮಾ ಆಗಿದೆ. ೨೦೧೭-೧೮ನೇ ಸಾಲಿನ ಅಡಿಕೆ ಬೆಳೆಯ ಕ್ಷೇತ್ರ ಒಟ್ಟು ೮೩೭.೩೪ ಎಕರೆ ಇದೆ. ರೈತರು ೫೩೮ ಎಕರೆ ಕ್ಷೇತ್ರಕ್ಕೆ ಮಾತ್ರ ವಿಮೆ ಮಾಡಿದ್ದಾರೆ. ಹೀಗಾಗಿ ಅಂಡಗಿ ಪಂಚಾಯ್ತಿಗೆ ಯಾವುದೇ ರೀತಿಯಿಂದ ಕಡಿತ ಅನ್ವಯವಾಗುವುದಿಲ್ಲ. ಇದನ್ನು ಪರಿಗಣಿಸಿ ರೈತರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು’ ಎಂದು ಅವರು ಪತ್ರದಲ್ಲಿ ವಿನಂತಿಸಿದ್ದಾರೆ.

‘ಬೆಳೆ ವಿಮೆ ಹಣ ಸರಿಯಾಗಿ ಬರದೇ ರೈತರಿಗೆ ತೊಂದರೆಯಾಗಿದೆ. ಹೀಗಾಗಿ ಪ್ರಧಾನಿಯವರಿಗೇ ನೇರವಾಗಿ ಪತ್ರ ಬರೆದಿದ್ದೇನೆ. ರೈತರಿಗೆ ನ್ಯಾಯ ಸಿಗುವ ಭರವಸೆಯಿದೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT