ವೀಣಾ-ಮಾವ 
ರಾಜ್ಯ

ಮಂಡ್ಯ: ಮಗನ ಬದುಕಿಗೆ ಕೊಳ್ಳಿಯಿಟ್ಟ ತಂದೆ, ಮಂಚಕ್ಕೆ ಬರಲಿಲ್ಲವೆಂದು ಸೊಸೆಗೆ ಚೂರಿ ಇರಿದು ಕೊಂದ ಮಾವ!

ಹಾಡಹಗಲೇ ಮಾವನಿಂದಲೇ ಸೊಸೆ ಹತ್ಯೆಯಾಗಿರುವ ಘಟನೆ  ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಮಂಡ್ಯ: ಹಾಡಹಗಲೇ ಮಾವನಿಂದಲೇ ಸೊಸೆ ಹತ್ಯೆಯಾಗಿರುವ ಘಟನೆ  ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ವೀಣಾ (24) ಕೊಲೆಯಾದ ಮಹಿಳೆ. ಮಾವ ನಾಗರಾಜ್‌ ಕೊಲೆ ಆರೋಪಿ. ಹಾಸನ ಜಿಲ್ಲೆಯ ಹಳ್ಳಿಯೊಂದರಿಂದ ರಾಗಿಮುದ್ದನಹಳ್ಳಿ ನಾಗರಾಜು ಪುತ್ರ ಅನಿಲ್‌ಗೆ 10 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿಗೆ ಸಿಂಚನಾ(5), ದರ್ಶಿನಿ(4) ಇಬ್ಬರು ಪುತ್ರಿಯರು ಇದ್ದರು. ಕೌಟುಂಬಿಕ ಕಾರಣಕ್ಕಾಗಿ ಮನೆಯಲ್ಲಿ ಸದಾ ಜಗಳ ನಡೆಯುತ್ತಿತ್ತು. ಮಾವ ನಾಗರಾಜುನೆ ಸೊಸೆಯ ಮೇಲೆ ಕಣ್ಣುಹಾಕಿದ್ದ ತನ್ನ ಕಾಮತೃಸೆಗೆ ಸಹಕರಿಸದ ಸೊಸೆಯ ಮೇಲೆ ದ್ವೇಷವಿತ್ತು, ಇದೇ ವಿಚಾರಕ್ಕೆ ನ್ಯಾಯ ಪಂಚಾಯತಿ ಕೂಡ ನಡೆದಿತ್ತು. ಪೊಲಿಸರಿಗೂ ದೂರು ನೀಡಲಾಗಿತ್ತು. ಮಾವನ ಕಿರುಕುಳದಿಂದ ಬೇಸತ್ತು ಬೇರೆ ಮನೆ ಮಾಡಿಕೊಂಡಿದ್ದರು.

ಟೈಲರಿಂಗ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ವೀಣಾ ಶನಿವಾರ ಟೈಲರಿಂಗ್ ಅಂಗಡಿಯಲ್ಲಿದ್ದರು, ಅಲ್ಲಿಗೆ ಬಂದ ಮಾವ ನಾಗರಾಜು ವೀಣಾ ಜೊತೆ  ಜಗಳ ಮಾಡಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಮಾವ ನಾಗರಾಜ್‌ ಸೊಸೆಯನ್ನು ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. 

ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಗಾಯಾಳು ಮಹಿಳೆಯನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸುವ ಯತ್ನ ಮಾಡಿದ್ದಾರೆ. ಅದರೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ನಾಗಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT