ಸಂಗ್ರಹ ಚಿತ್ರd 
ರಾಜ್ಯ

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ದೆಹಲಿಯಲ್ಲಿ ಬುಕ್ಕಿ ಬಂಧನ

ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್ ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅಂತರಾಷ್ಟ್ರೀಯ ಬುಕ್ಕಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ಪೊಲೀಸರು ದೆಹಲಿಯಲ್ಲಿ ಬಂಧನಕ್ಕೊಳಪಡಿಸಿದ್ದಾರೆ. 

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್ ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅಂತರಾಷ್ಟ್ರೀಯ ಬುಕ್ಕಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ಪೊಲೀಸರು ದೆಹಲಿಯಲ್ಲಿ ಬಂಧನಕ್ಕೊಳಪಡಿಸಿದ್ದಾರೆ. 

ಮ್ಯಾಚ್ ಫಿಕ್ಸಿಂಗ್ ಬೆಳಕಿಗೆ ಬರುತ್ತಿದ್ದೆತೆ ಬುಕ್ಕಿ ಸಯ್ಯಂ ತಲೆಮರೆಸಿಕೊಂಡಿದ್ದಲ ಬಳಿಕ ಆರೋಪಿಗಾಗಿ ಲುಕುಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು. ಆರೋಪಿ ಹರಿಯಾಣ ಮೂಲದವನಾಗಿದ್ದು, ಪ್ರಕರಣ ಬಳಿಕ ವೆಸ್ಟ್ ಇಂಡೀಸ್'ಗೆ ಪರಾರಿಯಾಗಿದ್ದ. ಪ್ರಕರಣ ಬಳಿಕ ಸಿಸಿಬಿ ಅಧಿಕಾರಿಗಳು ಹರಿಯಾಣದಲ್ಲಿರುವ ಆತನ ಕುಟುಂಬದವರನ್ನು ಪತ್ತೆ ಮಾಡಿ, ಅವರ ಮೂಲಕ ಆರೋಪಿಯನ್ನು ಕರೆತರುವ ಯತ್ನ ನಡೆಸಿದ್ದರು. ಇದರಂತೆ ಆರೋಪಿ ಶನಿವಾರ ರಾಜಧಾನಿ ದೆಹಲಿಗೆ ಆಗಮಿಸುತ್ತಿದ್ದಂತೆಯೇ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
 
ಸಯ್ಯಂ ಹರಿಯಾಣ ಮೂಲದ ಬುಕ್ಕಿಯಾಗಿದ್ದು, ಈತನಿಗೆ ಅಂತರಾಷ್ಟ್ರೀಯ ಮಟ್ಟಕ ಕ್ರಿಕೆಟ್ ಆಟಗಾರರು ಪರಿಚಯವಿದ್ದಾರೆಂದು ಹೇಳಲಾಗುತ್ತಿದೆ.  
 
ಬಂಧಿತ ಆರೋಪಿ ಸಯ್ಯಮ್ ಬಳ್ಳಾರಿ ಟಸ್ಕರ್ಸ್ನ ಬೌಲರ್ ಭವೇಶ್ ಗುಲೇಚಾ ಅವರನ್ನು ತನ್ನ ಗೆಳೆಯ ಭವೇಶ್ ಭಫಫ್ನ ಮೂಲಕ ಬುಕ್ ಮಾಡಿಕೊಳ್ಳಲು ಯತ್ನಿಸಿದ್ದ. ಗುಲೇಚ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಭಫ್ನನನ್ನು ಬಂಧನಕ್ಕೊಳಪಡಿಸಿದ್ದಾರೆ. ವಿಚಾರಣೆ ವೇಳೆ ಭಫ್ನ ಸಯ್ಯಂ ಹೆಸರನ್ನು ಬಾಯ್ಬಿಟ್ಟಿದ್ದ. 
 
ಬಂಧಿತ ಸಯ್ಯಂ ಗುಲೇಚ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಫೈವ್ ಸ್ಟಾರ್ ಹೋಟೆಲ್ ನಲ್ಲಿ ಭೇಟಿ ಮಾಡಿದ್ದ. ಈ ವೇಳೆ ಪ್ರತಿ ಓವರ್'ಗೆ 10ಕ್ಕಿಂತಲೂ ಹೆಚ್ಚು ರನ್ ನೀಡಿದರೆ, ದೊಡ್ಡ ಮೊತ್ತದ ಹಣ ನೀಡುವುದಾಗಿ ತಿಳಿಸಿದ್ದ. ಆದರೆ, ಗುಲೇಚಾ ಇದನ್ನು ತಿರಸ್ಕರಿಸಿದ್ದರು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT