ಸಂಗ್ರಹ ಚಿತ್ರ 
ರಾಜ್ಯ

ಕೆರೆಯಲ್ಲಿ ಮುಳುಗುತ್ತಿದ್ದ ಯುವಕನ ಪ್ರಾಣ ರಕ್ಷಿಸಿದ ಶಾಸಕ, ಮಾಜಿ ಸಂಸದ!

ಈಜು ಬಾರದೆ ನೀರಿನಲ್ಲಿ ಮುಳುಗುತ್ತಿದ್ದ ಯುವಕನೋರ್ವನನ್ನು ಶಾಸಕ, ಹಾಗೂ ಮಾಜಿ ಸಂಸದರ ನೆರವಿನಿಂದ ರಕ್ಷಿಸಿರುವ ಘಟನೆ ನಾಗಮಂಗಲದ ಬಿಂಡೇನಹಳ್ಳಿಯಲ್ಲಿ ನಡೆದಿದೆ.

ಮಂಡ್ಯ: ಈಜು ಬಾರದೆ ನೀರಿನಲ್ಲಿ ಮುಳುಗುತ್ತಿದ್ದ ಯುವಕನೋರ್ವನನ್ನು ಶಾಸಕ, ಹಾಗೂ ಮಾಜಿ ಸಂಸದರ ನೆರವಿನಿಂದ ರಕ್ಷಿಸಿರುವ ಘಟನೆ ನಾಗಮಂಗಲದ ಬಿಂಡೇನಹಳ್ಳಿಯಲ್ಲಿ ನಡೆದಿದೆ.

ಅಭಿ ಎಂಬ ಯುವಕನನ್ನೇ ನಾಗಮಂಗಲ ಶಾಸಕ ಎನ್.ಸುರೇಶ್ ಗೌಡ ಮತ್ತು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಸಮಯ ಪ್ರಜ್ಞೆಯಿಂದ ರಕ್ಷಿಸಲಾಗಿದೆ..

ಘಟನೆ ಹಿನ್ನೆಲೆ
ನಾಗಮಂಗಲ ತಾಲ್ಲೂಕಿನ ಬಿಂಡೇನಹಳ್ಳಿ ಗ್ರಾಮದಲ್ಲಿ  ಸುಮಾರು 20 ವರ್ಷಗಳ ನಂತರ ಬಿಂಡೇನಹಳ್ಳಿ ಕೆರೆ ತುಂಬಿದ್ದು ಕೆರೆ ತುಂಬಿದ ಸಂತೋಷಕ್ಕೆ ಗ್ರಾಮದ ಜನತೆ ದೇವರ ಪೂಜೆ ನಡೆಸಿ ತೆಪ್ಪೋತ್ಸವ ನಡೆಸುತ್ತಿದ್ದರು. 

ಬೆಂಗಳೂರಿನಿಂದ ಈ ತೆಪ್ಪೋತ್ಸವಕ್ಕೆ ಆಗಮಿಸಿದ್ದ ಅಭಿ ಎಂಬ ಯುವಕ ತೆಪ್ಪೋತ್ಸವದ ವೇಳೆ ಈಜಲು ಕೆರೆಗೆ ಇಳಿದು ಈಜು ಬಾರದೆ ನೀರಿನಲ್ಲಿ ಮುಳುಗುತ್ತಿದ್ದ. ಈ ಸಂದರ್ಭದಲ್ಲಿ ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದ. ಇದನ್ನು ಗಮನಿಸಿದ ತೆಪ್ಪೋತ್ಸವದಲ್ಲಿ ಪಾಲ್ಗೊಂಡಿದ್ದ ಶಾಸಕ ಸುರೇಶ್ ಗೌಡ, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡರು ಹಾಗೂ ಸ್ಥಳದಲ್ಲೇ ಇದ್ದ ಜನತೆ ತೆಪ್ಪವನ್ನು ವಾಪಸ್ ಕರೆಸಿ ಯುವಕನ ರಕ್ಷಣೆ ಮಾಡಿದ್ದಾರೆ.

ಈಜು ಬಾರದಿದ್ದರು ನೀರಿಗೆ ಇಳಿದ ಈ ಯುವಕನ ಹುಚ್ಚಾಟಕ್ಕೆ ಶಾಸಕ, ಮಾಜಿ ಸಂಸದರು ಬೆಸ್ತುಬಿದ್ದರು. ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿ ನಿಟ್ಟುಸಿರು ಬಿಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT