ಹೊಸಕೆರೆ ಹಳ್ಳಿ ಕೆರೆ ಕೋಡಿ ಒಡೆದು ಜಲಾವೃತಗೊಂಡ ಬಡಾವಣೆಗಳು; ಮೇಯರ್, ಆಯುಕ್ತರ ಭೇಟಿ, ಪರಿಶೀಲನೆ 
ರಾಜ್ಯ

ಹೊಸಕೆರೆ ಹಳ್ಳಿ ಕೆರೆ ಕೋಡಿ ಒಡೆದು ಜಲಾವೃತಗೊಂಡ ಬಡಾವಣೆಗಳು; ಮೇಯರ್, ಆಯುಕ್ತರ ಭೇಟಿ, ಪರಿಶೀಲನೆ 

ರಾಜರಾಜೇಶ್ವರ ನಗರ ವಾರ್ಡ್ ನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಹೊಸಕೆರೆಹಳ್ಳಿ ಕೆರೆಯ ಕೋಡಿ ಒಡೆದಿದ್ದು, ಸಮೀಪದ ಪುಷ್ಪಗಿರಿ ಮತ್ತು ಪ್ರಮೋದ್ ಬಡಾವಣೆಯ ರಸ್ತೆಗಳಿಗೆ ನೀರು ಹರಿದಿದ್ದು, ಸಾರ್ವಜನಿಕರು ತೊಂದರೆಗೀಡಾಗಿದ್ದಾರೆ.

ಬೆಂಗಳೂರು: ರಾಜರಾಜೇಶ್ವರ ನಗರ ವಾರ್ಡ್ ನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಹೊಸಕೆರೆಹಳ್ಳಿ ಕೆರೆಯ ಕೋಡಿ ಒಡೆದಿದ್ದು, ಸಮೀಪದ ಪುಷ್ಪಗಿರಿ ಮತ್ತು ಪ್ರಮೋದ್ ಬಡಾವಣೆಯ ರಸ್ತೆಗಳಿಗೆ ನೀರು ಹರಿದಿದ್ದು, ಸಾರ್ವಜನಿಕರು ತೊಂದರೆಗೀಡಾಗಿದ್ದಾರೆ.

60 ಎಕರೆ ವಿಸ್ತೀರ್ಣದ ಹೊಸಕೆರೆ ಹಳ್ಳಿ ಕೆರೆಯನ್ನು ಬಿಡಿಎ ಮತ್ತು ಬಿಬಿಎಂಪಿ, ಬೆಂಗಳೂರು ದಕ್ಷಿಣ ವಲಯದ ಮಳೆ ನೀರು ಸಂಗ್ರಹಕ್ಕೆ ಬಳಸಿಕೊಳ್ಳಲಾಗುತ್ತಿತ್ತು. ಆದರೆ, ಈ ಕೆರೆಗೆ ನಿರ್ಮಿಸಲಾಗಿದ್ದ ಮಣ್ಣಿನ ಗೋಡೆ ಶನಿವಾರ ರಾತ್ರಿ ಒಡೆದು ಹೋಗಿದ್ದು, ತಗ್ಗು ಪ್ರದೇಶದ ಮನೆಗಳು ಮತ್ತು ವಾಣಿಜ್ಯ ಸಂಕೀರ್ಣಗಳಿಗೆ ನೀರು ನುಗ್ಗಿದೆ. ಪರಿಣಾಮ ರಾತ್ರಿ ಇಡೀ ನಿವಾಸಿಗಳು ಸಮಸ್ಯೆ ಎದುರಿಸುವಂತಾಗಿತ್ತು. 

ಏಕಾಏಕಿ ಕೆರೆ ಒಡೆದು ನೀರು ನುಗ್ಗಿದ ಪರಿಣಾಮ ಕೆರೆಯಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಕೆಮಿಕಲ್ ಕಾರ್ಖಾನೆಗೆ ನೀರು ನುಗ್ಗಿ, ಕಾರ್ಖಾನೆಯ ಡ್ರಮ್ ಹಾಗೂ ಇನ್ನಿತರ ವಸ್ತುಗಳನ್ನು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಕಾಂಪೌಂಡ್ ಕುಸಿದು ಬಿದ್ದಿದೆ. ಕಾರು, ಬೈಕ್ ಸೇರಿದಂತೆ ಇನ್ನಿತರೆ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ. 

ವಿಷಯ ತಿಳಿಯುತ್ತಿದ್ದಂತೆಯೇ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಹಾಗೂ ಮೇಯರ್ ಗೌತಮ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಆರ್.ಆರ್.ನಗರ ವಲಯದ ವಿಶೇಷ ಆಯುಕ್ತರಿಗೆ ಹಾಗೂ ಮುಖ್ಯ ಎಂಜಿನಿಯರ್'ಗೆ ಸೂಚಿಸಿದ್ದಾರೆ. ಅಲ್ಲದೆ, ಕೆರೆ ಅಭಿವೃದ್ಧಿ ಜವಾಬ್ದಾರಿ ಹೊತ್ತ ಬಿಡಿಎ ಅಧಿಕಾರಿಗಳಿಗೆ ಕೆರೆ ಏರಿಯನ್ನು ತಾತ್ಕಾಲಿಕವಾಗಿ ಸರಿಪಡಿಸುವುದಕ್ಕೆ ಆಯುಕ್ತ ಅನಿಲ್ ಕುಮಾರ್ ಅವರು ಸೂಚಿಸಿದ್ದು, ಸೋಮವಾರ ಬಿಡಿಎ ಹಾಗೂ ಬಿಡಬ್ಲ್ಯೂಎಸ್ಎಸ್'ಬಿ ಅಧಿಕಾರಿಗಳ ಸಬೆ ಕರೆದಿದ್ದಾರೆ. 

ಧಾರಾಕಾರ ಮಳೆಗೆ ನಗರದಲ್ಲಿ ಕೆರೆ ಏರಿ ಒಡೆದು ಬಡಾವಣೆಗಳಿಗೆ ನೀರು ನುಗ್ಗಿರುವ ಎರಡನೇ ಘಟನೆ ಇದಾಗಿದೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿಯೂ ದೊಡ್ಡ ಬಿದರಕಲ್ಲು ಕೆರೆ ಏರಿ ಇದೇ ರೀತಿ ಹೊಡೆದು ಸುಮಾರು 10ಕ್ಕೂ ಹೆಚ್ಚು ಬಡಾವಣೆಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT