ಸುರೇಶ್ ತಳವಾರ 
ರಾಜ್ಯ

ಕೊಪ್ಪಳ: 6 ವರ್ಷಗಳಿಂದ ಪತ್ರಗಳನ್ನು ಹಂಚದೆ ತನ್ನ ಬಳಿಯೇ ಇಟ್ಟುಕೊಂಡ ಪೋಸ್ಟ್ ಮೆನ್!

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳದ ಪೊಸ್ಟ್ ಮೆನ್ ಗ್ರಾಮಕ್ಕೆ ಬಂದಿರುವ ಅಂಚೆ ಚೀಟಿ ಆಧಾರ್ ಕಾರ್ಡಗಳನ್ನು ಕಳೆದ 4 ವರ್ಷಗಳಿಂದ ಸುಮಾರು 1 ಸಾವಿರಕ್ಕೂ ಹೆಚ್ಚು ಪತ್ರಗಳನ್ನು ಮತ್ತು ಪ್ಯಾಕೇಟ್ ಗಳನ್ನು ಗ್ರಾಹಕರಿಗೆ...

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳದ ಪೊಸ್ಟ್ ಮೆನ್ ಗ್ರಾಮಕ್ಕೆ ಬಂದಿರುವ ಅಂಚೆ ಚೀಟಿ ಆಧಾರ್ ಕಾರ್ಡಗಳನ್ನು ಕಳೆದ 4 ವರ್ಷಗಳಿಂದ ಸುಮಾರು 1 ಸಾವಿರಕ್ಕೂ ಹೆಚ್ಚು ಪತ್ರಗಳನ್ನು ಮತ್ತು ಪ್ಯಾಕೇಟ್ ಗಳನ್ನು ಗ್ರಾಹಕರಿಗೆ ನೀಡದೆ ತನ್ನಲ್ಲಿ ಉಳಿಸಿಕೊಂಡ ಘಟನೆ ಸಂಗನಾಳ ಗ್ರಾಮದಲ್ಲಿ ನಡೆದಿದೆ.

ಸುರೇಶ್ ತಳವಾರ ಎಂಬ ಪೊಸ್ಟ್ ಮೆನ್ ನ ನಿರ್ಲಕ್ಷ್ಯದಿಂದ ಕಚೇರಿಗೆ ಸುಮಾರು 2016 ರಿಂದ 2019 ರವರೆಗೆ ಬಂದಂತಹ ಪತ್ರಗಳನ್ನು ಹಂಚಿಕೆ ಮಾಡದೆ ತನ್ನ ಬಳಿಯೇ ಉಳಿಸಿಕೊಂಡಿದ್ದಾನೆ.

ಕಚೇರಿಗೆ ಬಂದಿದ್ದ ಪತ್ರಗಳಲ್ಲಿ ಸರ್ಕಾರದ ಅಧಿಕೃತ ಪ್ರಕಟಣೆಗಳು, ಪರೀಕ್ಷೆಯ ಪ್ರವೇಶ ಪತ್ರಗಳು, ನೌಕರಿಯ ನೇಮಕ ಪತ್ರ ಹಾಗೂ ಬಹುಮುಖ್ಯವಾದ ಮಾಹಿತಿಯ ಪತ್ರಗಳು ಸೇರಿದೆ.

ಬ್ಯಾಂಕಿನಿಂದ ಹಾಗೂ ಇತರೆ ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ. ನಂತರ ಅಂಚೆ ಕಚೇರಿಗೆ ತೆರಳಿ ಪರಿಶೀಲಿಸಿದ್ದಾರೆ. ಆಗ ಎಲ್ಲ ದಾಖಲೆಗಳು ಸಿಕ್ಕಿದ್ದು, ಸುಮಾರು ನಾಲ್ಕು ವರ್ಷಗಳಿಂದ ಹಂಚದೆ ಹಾಗೇ ಇಟ್ಟ ಪತ್ರಗಳೆಲ್ಲವನ್ನೂ ಕಂಡು ಬೆರಗಾಗಿದ್ದಾರೆ.

ನಿರ್ಲಕ್ಷ್ಯ ತೋರಿದ ಸುರೇಶ್ ತಳವಾರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2016 ರಿಂದ ಇಲ್ಲಿಯವರೆಗೆ ಪೋಸ್ಟಿಗೆ ಬಂದ ಎಲ್ಲ ಪತ್ರಗಳನ್ನು ಸುರೇಶ್ ವಿತರಣೆ ಮಾಡದೆ ಹಾಗೇ ಇಟ್ಟುಕೊಂಡಿದ್ದ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?