ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಜ್ಯೂಸ್ ಎಂದು ಕಳೆನಾಶಕ ಕುಡಿದು ಬಾಲಕ ಸಾವು

ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಕುಡಿದು ಮೂರು ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. 

ಚಿಕ್ಕಮಗಳೂರು: ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಕುಡಿದು ಮೂರು ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. 

ಅಕ್ಟೋಬರ್ 24ರಂದು ಕಳೆನಾಶಕ ಸೇವಿಸಿದ್ದ ಮಗು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಅಕ್ಟೋಬರ್ 24ರಂದು ಜ್ಯೂಸ್‌ ಎಂದು ಭಾವಿಸಿ 3 ವರ್ಷದ ಮಗು ಅಗಸ್ತ್ಯ ಕಳೆನಾಶಕವನ್ನು ಸೇವಿಸಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್-ಪೂಜಿತ ದಂಪತಿಯ ಏಕೈಕ ಪುತ್ರನಾಗಿದ್ದ ಅಗಸ್ತ್ಯನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. 

ಆದರೆ 18 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಮಗು ಮೃತಪಟ್ಟಿದೆ. ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಗಸ್ತ್ಯ ಸಾವಿಗೀಡಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!

ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆಚ್ಚುವರಿ ಆಸ್ತಿಗಳ ಮುಟ್ಟುಗೋಲು!