ಸಂಗ್ರಹ ಚಿತ್ರ 
ರಾಜ್ಯ

ಮಡಿಕೇರಿ: ಸಾಲ ವಾಪಾಸ್ ಕೇಳಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್ ಗೆ ಮಚ್ಚಿನೇಟು!

ಬ್ಯಾಂಕ್ ಮ್ಯಾನೇಜರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಕಡಗದಾಳು ಎಂಬ ಗ್ರಾಮದಲ್ಲಿ ನಡೆದಿದೆ‌. 

ಮಡಿಕೇರಿ:  ಬ್ಯಾಂಕ್ ಮ್ಯಾನೇಜರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಕಡಗದಾಳು ಎಂಬ ಗ್ರಾಮದಲ್ಲಿ ನಡೆದಿದೆ‌.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮ್ಯಾನೇಜರ್ ಸತೀಶ್ ಎಂಬವರ ಮೇಲೆ ಗಣಪತಿ ಎಂಬುವವರು ಹಲ್ಲೆ ಮಾಡಿದ್ದಾರೆ.

ಆರೋಪಿ ಗಣಪತಿ, ಸತೀಶ್ ಬಳಿ 10 ಸಾವಿರ ರೂ ಸಾಲ ಮಾಡಿಕೊಂಡಿದ್ದರು. 10 ಸಾವಿರ ಪೈಕಿ ಗಣಪತಿ 2,500ರೂ ಉಳಿಸಿಕೊಂಡಿದ್ದರು ಎನ್ನಲಾಗಿದೆ. ಹಣ ಹಿಂತಿರುಗಿಸುವಂತೆ ಕೇಳಿದಾಗ ಬ್ಯಾಂಕ್ ಮ್ಯಾನೇಜರ್ ಸತೀಶ್ ಮೇಲೆ ಎರಗಿ ಬಿದ್ದ ಆರೋಪಿ ಗಣಪತಿ ತೀವ್ರ ವಾಗ್ವಾದ ನಡೆಸಿದ್ದಲ್ಲದೆ ಕತ್ತಿಯಿಂದ ಸತೀಶ್ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಕತ್ತಿ ಸಮೇತ ಪರಾರಿಯಾಗಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಸಧ್ಯ ಹಲ್ಲೆಯಿಂದ ಗಾಯಗೊಡಿರುವ ಮ್ಯಾನೇಜರ್ ಸತೀಶ್ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT