ಸಂಗ್ರಹ ಚಿತ್ರ 
ರಾಜ್ಯ

ಟಿಡಿಆರ್ ಹಗರಣ: ಪ್ರಧಾನ ಆರೋಪಿ ಕೃಷ್ಣಲಾಲ್ ಎಸಿಬಿ ಬಲೆಗೆ

ಟಿಡಿಆರ್ ಹಗರಣದ ಪ್ರಮುಖ ಆರೋಪಿ ಮಹಾದೇವಪುರ ವಲಯದ ಸಹಾಯಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ಕೃಷ್ಣ ಲಾಲ್ ನನ್ನು  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಬೆಂಗಳೂರು: ಟಿಡಿಆರ್ ಹಗರಣದ ಪ್ರಮುಖ ಆರೋಪಿ ಮಹಾದೇವಪುರ ವಲಯದ ಸಹಾಯಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ಕೃಷ್ಣ ಲಾಲ್ ನನ್ನು  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಕೃಷ್ಣಲಾಲ್ ಹಗರಣದ ನಂಬರ್ ಒನ್ ಆರೋಪಿಯಾಗಿದ್ದಾನೆ. ಇನ್ನು ಲಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಲೋಕಾಯುಕ್ತ ನ್ಯಾಯಾಲಯ ವಜಾ ಮಾಡಿತ್ತು. ಜಾಮೀನು ಅರ್ಜಿ ವಜಾ ಆದ ಬೆನ್ನಲ್ಲೇ ಕೃಷ್ಣ ಲಾಲ್ ತಲೆ ಮರೆಸಿಕೊಂಡಿದ್ದ.

ಕೃಷ್ಣಲಾಲ್ ತಾವು ಕೌಡೇನಹಳ್ಳಿ ಗ್ರಾಮದ ಸರ್ವೆ ನಂಬ್ರ 9ರ ಮಾಲೀಕರ ಗುರುತನ್ನು ಮರೆ ಮಾಚಿದ್ದಾನೆ. ಅಲ್ಲದೆ ಸರ್ವೆ ನಂಬ್ರ 10 ರಲ್ಲಿನ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಳಸಿ, ಸೈಟ್‌ಗೆ ಲಭ್ಯವಿರುವ ಟಿಡಿಆರ್.ಮೊತ್ತವನ್ನು ಹೆಚ್ಚಿಸಿದ್ದಾನೆ.  ಅದನ್ನು  ಖಾಸಗಿ ವ್ಯಕ್ತಿಗಳಿಗೆ ವಿತರಿಸಿದ್ದಾನ್ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಒಟ್ಟು 47 ಟಿಡಿಆರ್ ದಾಖಲೆಗಳನ್ನು ಅಡಗಿಸಿಟ್ಟಿರುವ ಆರೋಪ ಕೃಷ್ಣಲಾಲ್ ಮೇಲಿದ್ದು ಅದನ್ನು ಬಳಸಿಕೊಂಡು ಕೋಟಿ ಮೌಲ್ಯದ ಟಿಡಿಆರ್ ಅನ್ನು ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ ಮಾಡಲಾಗಿದೆ. ಹಗರಣದಿಂದ ಎಷ್ಟು ನಷ್ಟವಾಗಿದೆ ಎಂದು ನಿರ್ಣಯಿಸಲು ಎಸಿಬಿ ಈ ದಾಖಲೆಗಳನ್ನು ಹುಡುಕುವ ಪ್ರಯತ್ನಗಳನ್ನು ಮಾಡುತ್ತಿದೆ. ಕಾಣೆಯಾದ ಫೈಲ್‌ಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ