ಸಂಗ್ರಹ ಚಿತ್ರ 
ರಾಜ್ಯ

ಟಿಡಿಆರ್ ಹಗರಣ: ಪ್ರಧಾನ ಆರೋಪಿ ಕೃಷ್ಣಲಾಲ್ ಎಸಿಬಿ ಬಲೆಗೆ

ಟಿಡಿಆರ್ ಹಗರಣದ ಪ್ರಮುಖ ಆರೋಪಿ ಮಹಾದೇವಪುರ ವಲಯದ ಸಹಾಯಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ಕೃಷ್ಣ ಲಾಲ್ ನನ್ನು  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಬೆಂಗಳೂರು: ಟಿಡಿಆರ್ ಹಗರಣದ ಪ್ರಮುಖ ಆರೋಪಿ ಮಹಾದೇವಪುರ ವಲಯದ ಸಹಾಯಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ಕೃಷ್ಣ ಲಾಲ್ ನನ್ನು  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಕೃಷ್ಣಲಾಲ್ ಹಗರಣದ ನಂಬರ್ ಒನ್ ಆರೋಪಿಯಾಗಿದ್ದಾನೆ. ಇನ್ನು ಲಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಲೋಕಾಯುಕ್ತ ನ್ಯಾಯಾಲಯ ವಜಾ ಮಾಡಿತ್ತು. ಜಾಮೀನು ಅರ್ಜಿ ವಜಾ ಆದ ಬೆನ್ನಲ್ಲೇ ಕೃಷ್ಣ ಲಾಲ್ ತಲೆ ಮರೆಸಿಕೊಂಡಿದ್ದ.

ಕೃಷ್ಣಲಾಲ್ ತಾವು ಕೌಡೇನಹಳ್ಳಿ ಗ್ರಾಮದ ಸರ್ವೆ ನಂಬ್ರ 9ರ ಮಾಲೀಕರ ಗುರುತನ್ನು ಮರೆ ಮಾಚಿದ್ದಾನೆ. ಅಲ್ಲದೆ ಸರ್ವೆ ನಂಬ್ರ 10 ರಲ್ಲಿನ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಳಸಿ, ಸೈಟ್‌ಗೆ ಲಭ್ಯವಿರುವ ಟಿಡಿಆರ್.ಮೊತ್ತವನ್ನು ಹೆಚ್ಚಿಸಿದ್ದಾನೆ.  ಅದನ್ನು  ಖಾಸಗಿ ವ್ಯಕ್ತಿಗಳಿಗೆ ವಿತರಿಸಿದ್ದಾನ್ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಒಟ್ಟು 47 ಟಿಡಿಆರ್ ದಾಖಲೆಗಳನ್ನು ಅಡಗಿಸಿಟ್ಟಿರುವ ಆರೋಪ ಕೃಷ್ಣಲಾಲ್ ಮೇಲಿದ್ದು ಅದನ್ನು ಬಳಸಿಕೊಂಡು ಕೋಟಿ ಮೌಲ್ಯದ ಟಿಡಿಆರ್ ಅನ್ನು ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ ಮಾಡಲಾಗಿದೆ. ಹಗರಣದಿಂದ ಎಷ್ಟು ನಷ್ಟವಾಗಿದೆ ಎಂದು ನಿರ್ಣಯಿಸಲು ಎಸಿಬಿ ಈ ದಾಖಲೆಗಳನ್ನು ಹುಡುಕುವ ಪ್ರಯತ್ನಗಳನ್ನು ಮಾಡುತ್ತಿದೆ. ಕಾಣೆಯಾದ ಫೈಲ್‌ಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT