ಹಿಂದೂಗಳು ಸಹ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಸಹಕರಿಸಿ ಸೌಹಾರ್ದತೆ ಮೆರೆಯಬೇಕು - ಪೇಜಾವರ ಸ್ವಾಮೀಜಿ 
ರಾಜ್ಯ

ಹಿಂದೂಗಳು ಸಹ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಸಹಕರಿಸಿ ಸೌಹಾರ್ದತೆ ಮೆರೆಯಬೇಕು - ಪೇಜಾವರ ಸ್ವಾಮೀಜಿ

1992ರಲ್ಲಿ ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಬಿಜೆಪಿ ವರಿಷ್ಠ ನಾಯಕ ಎಲ್ ಕೆ ಅಡ್ವಾಣಿ, ಮತ್ತಿತರ ಕರಸೇವಕರ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀಥ೯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಬೆಳಗಾವಿ: 1992ರಲ್ಲಿ ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಬಿಜೆಪಿ ವರಿಷ್ಠ ನಾಯಕ ಎಲ್ ಕೆ ಅಡ್ವಾಣಿ, ಮತ್ತಿತರ ಕರಸೇವಕರ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀಥ೯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಗಳನ್ನು ಹಿಂಪಡೆಯಬೇಕೆನ್ನುವ ಹಿಂದೂ ಸಂಘಟನೆಗಳ ಬೇಡಿಕೆಗೆ ತಮ್ಮ ಸಹಮತವಿದೆ. ರಾಮ ಜನ್ಮಭೂಮಿ ನಿರ್ಮಾಣ ಕುರಿತಂತೆ ನಡೆದದ್ದು ಚಳವಳಿ. ಅದೊಂದು ಸ್ವಾತಂತ್ರ್ಯ ಆಂದೋಲನ. ಇಂತಹ ಆಂದೋಲನದಲ್ಲಿ ಭಾಗಿಯಾದವರ ಮೇಲೆ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. 

ನ್ಯಾಯಾಲಯ ತೀರ್ಪು ಯಾರಿಗೂ ಬೇಸರವಾಗಿಲ್ಲ. ಹಿಂದೂಗಳಿಗೆ ರಾಮಜನ್ಮಭೂಮಿಯ ಜಾಗ ನೀಡಿದರೆ ಮುಸ್ಲಿಮರಿಗೆ ಮಸೀದಿಯನ್ನು ನಿರ್ಮಿಸಲು ಜಾಗವನ್ನು ಕೊಟ್ಟಿದೆ. ಅನೇಕ ಮುಸ್ಲಿಮರು ತೀರ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಸೌಹಾರ್ದತೆ ಕೆಡಿಸುವ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಆಗದಂತೆ ಮುನ್ನಡೆಯಬೇಕಾಗಿದೆ. ಮುಸ್ಲಿಮರು ರಾಮಮಂದಿರ ನಿರ್ಮಾಣಕ್ಕೆ ಸಹಕರಿಸಬೇಕು. ಅದರಂತೆ ಹಿಂದೂಗಳು ಮಸೀದಿಯನ್ನು ನಿರ್ಮಿಸಲು ಸಹಕರಿಸಿ ಸೌಹಾರ್ದತೆಯನ್ನು ಮೆರೆಯಬೇಕು ಎಂದು ಸ್ವಾಮೀಜಿ ಮನವಿ ಮಾಡಿಕೊಂಡರು. ಮುಂದೆ ಮಾತನಾಡಿದ ಅವರು, ಬಾಬ್ರಿ ಮಸೀದಿಯಂತೆ ಮಥುರಾ ಮತ್ತು ಕಾಶಿ ಗಳಲ್ಲೂ ಇಂತಹ  ಪ್ರಕರಣಗಳು ಮರುಕಳಿಸಬಹುದು ಎನ್ನುವ ವಾದವನ್ನು ಅವರು ಒಪ್ಪಲಿಲ್ಲ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಈಗಾಗಲೇ ಆರಂಭಿಸಿದ್ದು ಯಾವುದೇ ಸಂಘರ್ಷಕ್ಕೆ ಅವಕಾಶ ಇಲ್ಲ ಎಂದು ಪೇಜಾವರ ಸ್ವಾಮೀಜಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT