ಕಾರ್ಯಕ್ರಮದಲ್ಲಿ ವಿಶ್ವನಾಥ್ 
ರಾಜ್ಯ

ಬಿಲ್ಡರ್‌ ಗಳ ಸಮಸ್ಯೆ ಪರಿಹಾರಕ್ಕೆ ಸದ್ಯದಲ್ಲೇ ಮುಖ್ಯಮಂತ್ರಿಗಳೊಂದಿಗೆ ಸಭೆ: ಎಸ್‌ ಆರ್‌ ವಿಶ್ವನಾಥ್‌

ದುರ್ಬಲ ಆರ್ಥಿಕ ಪರಿಸ್ಥಿತಿಯಲ್ಲಿ ಬಿಲ್ಡರ್‌ ಗಳು ತೀವ್ರ ತೊಂದರೆ ಎದುರಿಸುತ್ತಿದ್ದು, ರಾಷ್ಟ್ರ ನಿರ್ಮಾಣಕ್ಕೆ ಸಾಕಷ್ಟು ಕೊಡುಗೆ ನೀಡುತ್ತಿರುವ ಬಿಲ್ಡರ್‌ ಗಳ ಸಮಸ್ಯೆಗಳನ್ನು ರಾಜ್ಯ ಸರಕಾರ ಬಗೆಹರಿಸಲಿದೆ...

ಬೆಂಗಳೂರು: ದುರ್ಬಲ ಆರ್ಥಿಕ ಪರಿಸ್ಥಿತಿಯಲ್ಲಿ ಬಿಲ್ಡರ್‌ ಗಳು ತೀವ್ರ ತೊಂದರೆ ಎದುರಿಸುತ್ತಿದ್ದು, ರಾಷ್ಟ್ರ ನಿರ್ಮಾಣಕ್ಕೆ ಸಾಕಷ್ಟು ಕೊಡುಗೆ ನೀಡುತ್ತಿರುವ ಬಿಲ್ಡರ್‌ ಗಳ ಸಮಸ್ಯೆಗಳನ್ನು ರಾಜ್ಯ ಸರಕಾರ ಬಗೆಹರಿಸಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌* ಭರವಸೆ ನೀಡಿದ್ದಾರೆ.

ಬಿಲ್ಡರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್‌ ಎಂ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿಶ್ವನಾಥ್ ಅವರು, ದೇಶದಲ್ಲಿ ನೋಟು ಅಮಾನ್ಯೀಕರಣದ ನಂತರ ಆಗಿರುವ ಆರ್ಥಿಕ ಬೆಳವಣಿಗೆಗಳ ಹಿನ್ನಲೆಯಲ್ಲಿ ಬಿಲ್ಡರ್‌ ಗಳು ತಾವು ನಿರ್ಮಿಸಿದ ಫ್ಲಾಟ್‌ ಗಳು ಮಾರಾಟವಾಗದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದರಲ್ಲಿ ಮಧ್ಯಮ ಗಾತ್ರದ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಇವರಿಗೆ ಇರುವ ತೊಂದರೆಗಳು, ರಾಜ್ಯ ಸರಕಾರದಿಂದ ಆಗಬಹುದಾದ ಹಲವಾರು ಅನುಕೂಲಗಳ ಬಗ್ಗೆ ಚರ್ಚೆ ನಡೆಸಲು ಸದ್ಯದಲ್ಲೇ ಮುಖ್ಯಮಂತ್ರಿಗಳ ಜೊತೆ ಸಭೆಗೆ ವ್ಯವಸ್ಥೆ ಮಾಡುವುದಾಗಿ ಹೇಳಿದರು.

ನಗರದ ಮೂಲಭೂತ ಸೌಕರ್ಯಗಳ ಹೆಚ್ಚಳಕ್ಕೆ ಯಡಿಯೂರಪ್ಪ ಅವರು ಬಹಳಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಈಗಾಗಲೇ ಹಲವಾರು ಯೋಜನೆಗಳನ್ನು ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆಗಳ ಅನುಷ್ಠಾನದ ನಂತರ ನಗರ ಮತ್ತಷ್ಟು ಸುಂದರವಾಗಲಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ಬಿಲ್ಡರ್ಸ್‌ ಗಳ ಅಗತ್ಯತೆ ಬಹಳಷ್ಟಿದೆ. ಇದನ್ನು ಮನಗೊಂಡು ಈ ಕ್ಷೇತ್ರದಲ್ಲಿ ಆರ್ಥಿಕ ಚಟುವಟಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ವಿಶ್ವನಾಥ್‌ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT