ಸೇನಾ ಭರ್ತಿ ರ್ಯಾಲಿಗೆ ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದ ಯುವಕ: ಪೊಲೀಸರಿಂದ ವಿಚಾರಣೆ 
ರಾಜ್ಯ

ಸೇನಾ ಭರ್ತಿ ರ್ಯಾಲಿಗೆ ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದ ಯುವಕ: ಪೊಲೀಸರಿಂದ ವಿಚಾರಣೆ

ಕೊಪ್ಪಳದಲ್ಲಿ ನ.05 ರಿಂದ ನಡೆಯುತ್ತಿರುವ ಸೇನಾ ಭರ್ತಿ ರ್ಯಾಲಿಯಲ್ಲಿ ನಕಲಿ ದಾಖಲೆ ನೀಡಿದ್ದ ಯುವಕನೋರ್ವ ಸಿಕ್ಕಿಬಿದ್ದಿದ್ದಾನೆ. 

ಕೊಪ್ಪಳ: ಕೊಪ್ಪಳದಲ್ಲಿ ನ.05 ರಿಂದ ನಡೆಯುತ್ತಿರುವ ಸೇನಾ ಭರ್ತಿ ರ್ಯಾಲಿಯಲ್ಲಿ ನಕಲಿ ದಾಖಲೆ ನೀಡಿದ್ದ ಯುವಕನೋರ್ವ ಸಿಕ್ಕಿಬಿದ್ದಿದ್ದಾನೆ. 

ರಾಜ್ಯದ 6 ಜಿಲ್ಲೆಯ ಯುವಕರಿಗಾಗಿ ಸೇನಾ ಭರ್ತಿ ರ್ಯಾಲಿಯನ್ನು ನಡೆಸಲಾಗುತ್ತಿತ್ತು. ಆದರೆ ರಾಜಸ್ಥಾನದಿಂದ ಬಂದಿದ್ದ ಯುವಕ ರಾಜೇಂದ್ರ ಸಿಂಗ್ ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾನೆ. 

ರಾಜಸ್ಥಾನದ ವ್ಯಾಸಂಗ ಪ್ರಮಾಣಪತ್ರಗಳ ಜೊತೆಗೆ ತಾನು ಗಂಗಾವತಿ ನಿವಾಸಿ ಎಂದು ಪ್ರಮಸಣ ಪತ್ರ ಸಲ್ಲಿಸಿದ್ದಾನೆ. ದೈಹಿಕ ಪರೀಕ್ಷೆಗೂ ಹಾಜರಾಗಿದ್ದ ರಾಜೇಂದ್ರ ಸಿಂಗ್, ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದ. ಆ ನಂತರ ದಾಖಲಾತಿ ಪರಿಶೀಲನೆ ವೇಳೆ ಈತ ನಕಲಿ ಪ್ರಮಾಣಪತ್ರ ನೀಡಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಆರ್ಮಿ ಕರ್ನಲ್ ಕೊಪ್ಪಳ ನಗರ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಯುವಕ ನಕಲಿ ಪ್ರಮಾಣಪತ್ರ ನೀಡಿರುವುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT