ಡಾ ಸರೋಜಮ್ಮ ಪ್ರಶಸ್ತಿಯನ್ನು ಡಾ.ಅಂಬರೀಷ್ ಅವರ ಪರವಾಗಿ ಅವರ ಪತ್ನಿ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಪ್ರದಾನ ಮಾಡಿದ ಸಂದರ್ಭ 
ರಾಜ್ಯ

ಬೆಂಗಳೂರಿನಲ್ಲಿಯೇ ಫಿಲಂ ಸಿಟಿ ನಿರ್ಮಾಣ ಮಾಡಲು ಸರ್ಕಾರ ಮುಂದು:ಡಾ ಸಿ ಎನ್ ಅಶ್ವಥ್ ನಾರಾಯಣ 

ಬೆಂಗಳೂರಿನಲ್ಲಿಯೇ ಫಿಲಂ ಸಿಟಿ ಮಾಡಬೇಕೆಂಬ ಯೋಜನೆಯಿದೆ. ಇದಕ್ಕಾಗಿ ಸೂಕ್ತ ಸ್ಥಳ ಹುಡುಕುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವಥನಾರಾಯಣ ತಿಳಿಸಿದರು.

ಬೆಂಗಳೂರು: ಚಲನಚಿತ್ರ ಅಧ್ಯಯನ ಮತ್ತು ಕಲೆ, ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲು ಫಿಲಂ ಸಿಟಿಯನ್ನು ಶೀಘ್ರವೇ ನಿರ್ಮಿಸಬೇಕೆಂಬುದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಶಯವಾಗಿದೆ. ಬೆಂಗಳೂರಿನಲ್ಲಿಯೇ ಫಿಲಂ ಸಿಟಿ ಮಾಡಬೇಕೆಂಬ ಯೋಜನೆಯಿದೆ. ಇದಕ್ಕಾಗಿ ಸೂಕ್ತ ಸ್ಥಳ ಹುಡುಕುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವಥನಾರಾಯಣ ತಿಳಿಸಿದರು.


ಅವರು ಇಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಹಿರಿಯ ನಟ ಅಂಬರೀಷ್ ಗೆ ಮರಣೋತ್ತರವಾಗಿ ಡಾ. ಬಿ.ಸರೋಜಾದೇವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಅಂಬರೀಶ್​ ಓರ್ವ ಮಹಾನ್ ನಟ. ನನ್ನ ಪ್ರತಿಯೊಂದು ವಿಷಯದಲ್ಲೂ ಅವರ ಪ್ರಭಾವ ಇದೆ. ಅವರಿಗೆ ಈ ಪ್ರಶಸ್ತಿ ನೀಡುವ ಅವಕಾಶ ಸಿಕ್ಕಿದ್ದಕ್ಕೆ ಸಂತೋಷವಾಗಿದೆ. ಚಿತ್ರರಂಗದಲ್ಲಿ‌ ಇಂಥ ಏನೇ ಸಮಸ್ಯೆ ಇದ್ದರೂ ಅಂಬರೀಶ್​ ಪರಿಹಾರ ನೀಡುತ್ತಿದ್ದರು. ಅವರ ದಾರಿಯಲ್ಲಿ ನಾವು ಸಾಗಬೇಕಾಗಿದೆ ಎಂದು ಹೇಳಿದರು.


ದಿವಂಗತ ಅಂಬರೀಷ್ ಅವರ ಪರವಾಗಿ ಅವರ ಪತ್ನಿ ಸಂಸದೆ ಸುಮಲತಾ ಅಂಬರೀಷ್ ಪ್ರಶಸ್ತಿ ಸ್ವೀಕರಿಸಿದರು. ಹಿರಿಯ ನಟಿ ಡಾ. ಸರೋಜಾದೇವಿ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?