ರಾಜ್ಯ

ಚಾಮರಾಜನಗರ: ಹಿರೇಕಾಟಿ ಹತ್ತಿರ ಅಪರಿಚಿತ ವ್ಯಕ್ತಿ ಕೊಲೆ

Nagaraja AB

ಚಾಮರಾಜನಗರ:-ಗುಂಡ್ಲುಪೇಟೆ ತಾಲೂಕಿನ ಹಿರೇಕಾಟಿ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ದುಷ್ಕರ್ಮಿಗಳು ಆ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿರುವ ಶಂಕೆ ಮೇಲ್ನೊಟಕ್ಕೆ ಕಂಡುಬಂದಿದೆ.

ಕೊಲೆಯಾಗಿರುವ ವ್ಯಕ್ತಿಯ  ಪೂರ್ವಪರ ತಿಳಿದುಬಂದಿಲ್ಲ. ಗುಂಡ್ಲುಪೇಟೆಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಪರಿಚಿತ ವ್ಯಕ್ತಿಯ ಕೊಲೆಯ ಸಂಬಂಧ ಪೊಲೀಸ್ ತನಿಖೆ ಪ್ರಾರಂಭವಾಗಿದೆ.                                  
 

SCROLL FOR NEXT