ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು! 
ರಾಜ್ಯ

ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು!

ಮುಖ್ಯ ಶಿಕ್ಷಕರಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದ ಬಾಲು ನಾಯ್ಕ್​ ಅವರು ನಿಯೋಜನೆಯಾಗಿರುವ ಅಂಬಿಕಾಪುರಕ್ಕೆ ಹೋಗುವ ತನಕ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದು ಶಾಲೆಗೆ ಬೀಗ ಜಡಿದಿದ್ದಾರೆ.

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನ.18 ರಂದು ಕಾಡಂಚಿನ ಗ್ರಾಮವಾದ ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಲು ಆಗಮಿಸುತ್ತಿದ್ದಾರೆ. ಆದರೆ, ಮೀಣ್ಯಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪಾಲಕರು ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. 

ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು... ಯಾಕಂತಿರಾ!? ಹೌದು, ಶಾಲೆಯ ಮುಖ್ಯಶಿಕ್ಷಕ ಬಾಲು ನಾಯ್ಕ ಎಂಬುವರು ಸೆಪ್ಟಂಬರ್​ ನಲ್ಲೇ ಬೇರೆ ಶಾಲೆಗೆ ನಿಯೋಜನೆಯಾಗಿದ್ದರೂ ತೆರಳದೇ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯ ಶಿಕ್ಷಕರಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದ ಬಾಲು ನಾಯ್ಕ್​ ಅವರು ನಿಯೋಜನೆಯಾಗಿರುವ ಅಂಬಿಕಾಪುರಕ್ಕೆ ಹೋಗುವ ತನಕ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ. 

ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಪೋಷಕರುಇನ್ನು ಪಾಲಕರ ಪ್ರತಿಭಟನೆಗೆ ಮಕ್ಕಳು ಕೂಡ ಕೈಜೋಡಿಸಿದ್ದು, ತಮಗೆ ಬೇರೆ ಮುಖ್ಯಶಿಕ್ಷಕರನ್ನು ನಿಯೋಜಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಮಂಗಳವಾರ ಶಿಕ್ಷಣ ಸಚಿವರಿಗೆ ಮನವಿ ಪತ್ರ ನೀಡುವುದಾಗಿ ವಿದ್ಯಾರ್ಥಿಗಳ ಪಾಲಕರು ತಿಳಿಸಿದ್ದಾರೆ.

ವರದಿ: ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT