ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು! 
ರಾಜ್ಯ

ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು!

ಮುಖ್ಯ ಶಿಕ್ಷಕರಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದ ಬಾಲು ನಾಯ್ಕ್​ ಅವರು ನಿಯೋಜನೆಯಾಗಿರುವ ಅಂಬಿಕಾಪುರಕ್ಕೆ ಹೋಗುವ ತನಕ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದು ಶಾಲೆಗೆ ಬೀಗ ಜಡಿದಿದ್ದಾರೆ.

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನ.18 ರಂದು ಕಾಡಂಚಿನ ಗ್ರಾಮವಾದ ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಲು ಆಗಮಿಸುತ್ತಿದ್ದಾರೆ. ಆದರೆ, ಮೀಣ್ಯಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪಾಲಕರು ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. 

ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು... ಯಾಕಂತಿರಾ!? ಹೌದು, ಶಾಲೆಯ ಮುಖ್ಯಶಿಕ್ಷಕ ಬಾಲು ನಾಯ್ಕ ಎಂಬುವರು ಸೆಪ್ಟಂಬರ್​ ನಲ್ಲೇ ಬೇರೆ ಶಾಲೆಗೆ ನಿಯೋಜನೆಯಾಗಿದ್ದರೂ ತೆರಳದೇ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯ ಶಿಕ್ಷಕರಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದ ಬಾಲು ನಾಯ್ಕ್​ ಅವರು ನಿಯೋಜನೆಯಾಗಿರುವ ಅಂಬಿಕಾಪುರಕ್ಕೆ ಹೋಗುವ ತನಕ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ. 

ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಪೋಷಕರುಇನ್ನು ಪಾಲಕರ ಪ್ರತಿಭಟನೆಗೆ ಮಕ್ಕಳು ಕೂಡ ಕೈಜೋಡಿಸಿದ್ದು, ತಮಗೆ ಬೇರೆ ಮುಖ್ಯಶಿಕ್ಷಕರನ್ನು ನಿಯೋಜಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಮಂಗಳವಾರ ಶಿಕ್ಷಣ ಸಚಿವರಿಗೆ ಮನವಿ ಪತ್ರ ನೀಡುವುದಾಗಿ ವಿದ್ಯಾರ್ಥಿಗಳ ಪಾಲಕರು ತಿಳಿಸಿದ್ದಾರೆ.

ವರದಿ: ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT