ರಾಜ್ಯ

ಉಪ ಚುನಾವಣೆ ಹಿನ್ನೆಲೆ: ಬೆಂಗಳೂರಿನಲ್ಲಿ 150ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ದಾಳಿ

Lingaraj Badiger

ಬೆಂಗಳೂರು: ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಕೆಆರ್‌ಪುರಂ ವಿಭಾಗದ ಬಾಣಸವಾಡಿ ಉಪವಿಭಾಗದ 150ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ಪೊಲೀಸರು ಮಂಗಳವಾರ ದಾಳಿ ನಡೆಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬಾಣಸವಾಡಿ ಉಪವಿಭಾಗದ ರಾಮಮೂರ್ತಿ ನಗರ, ಹೆಣ್ಣೂರು, ಕಾಡುಗೊಂಡನಹಳ್ಳಿ, ದೇವರಜೀವನಹಳ್ಳಿ, ಬಾಣಸವಾಡಿ ಸೇರಿದಂತೆ ೬ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ 4 ರಿಂದ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

ರೌಡಿಗಳಾದ ತನ್ವೀರ್, ಸೋಹೆಲ್, ಶಕೀರ್, ಅಜ್ಮದ್, ಶಕೀಲ್, ರಾಜಕುಟ್ಟಿ ಸೇರಿದಂತೆ 150ಕ್ಕೂ ಹೆಚ್ಚು ರೌಡಿಗಳನ್ನು ಬಾಣಸವಾಡಿ ಪೊಲೀಸ್ ಠಾಣೆಯ ಆವರಣಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದೆ.

SCROLL FOR NEXT