ರಾಜ್ಯ

ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣ ಗೌಡ ಮೇಲೆ ಚಪ್ಪಲಿ ಎಸೆದ ಜೆಡಿಎಸ್ ಕಾರ್ಯಕರ್ತರು 

Manjula VN

ಮೈಸೂರು: ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣ ಗೌಡ ಮೇಲೆ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೆ.ಆರ್.ಪೇಟೆಯಲ್ಲಿ ಸೋಮವಾರ ನಡೆದಿದೆ. 

ನಾರಾಯಣಗೌಡ ಅವರು ಮೊದಲು ಜೆಡಿಎಸ್ ಪಕ್ಷದಲ್ಲಿದ್ದರು. ಇದೀಗ ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಾಪತ್ರ ಸಲ್ಲಿಕೆಗೆಂದು ತೆರಳಿದ್ದ ನಾರಾಯಣ ಗೌಡ ಅವರ ಮೇಲೆ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ಎಸೆದಿದ್ದು, ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿಗೆ ಹಾರಿದ್ದೀರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ನಾಮಪತ್ರಿ ಸಲ್ಲಿಕೆ ವೇಳೆ ತಹಶೀಲ್ದಾರ್ ಕಚೇರಿ ಬಳಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು. ನಾರಾಯಣಗೌಡ ಅವರಿಗೆ ಧಿಕ್ಕಾರ ಕೂಗುತ್ತಾ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಜನರನ್ನು ತಡೆಹಿಡಿಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು, ನಾರಾಯಣ ಗೌಡ ಹಾಗೂ ಅವರ ಕುಟುಂಬ ಸದಸ್ಯರನ್ನು ದಾಳಿಯಿಂದ ರಕ್ಷಣೆ ಮಾಡಿದರು. 

ದಾಳಿ ಬಳಿಕ ಪ್ರತಿಕ್ರಿಯೆ ನೀಡಿದ ನಾರಾಯಣ ಗೌಡ ಅವರು, ಜೆಡಿಎಸ್ ಕಾರ್ಯಕರ್ತರು ತಮ್ಮ ಬಣ್ಣವನ್ನು ತೋರಿಸಿದರು ಎಂದಿದ್ದಾರೆ. 

SCROLL FOR NEXT