ಪಂಜಾಬಿನ ಇಬ್ಬರು ಹೆಸರಾಂತ ಸಾಹಿತಿಗಳಿಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ 
ರಾಜ್ಯ

ಪಂಜಾಬಿನ ಇಬ್ಬರು ಹೆಸರಾಂತ ಸಾಹಿತಿಗಳಿಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ

ಪಂಜಾಬಿನ ಹೆಸರಾಂತ ಸಾಹಿತಿಗಳಾದ ಅಜೀತ್‌ ಕೌರ್‌ ಹಾಗೂ ಗುರುಬಚನ್‌ ಸಿಂಗ್‌ ಭುಲ್ಲರ್‌ ಅವರುಗಳು ೨೦೧೯ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ: ಪಂಜಾಬಿನ ಹೆಸರಾಂತ ಸಾಹಿತಿಗಳಾದ ಅಜೀತ್‌ ಕೌರ್‌ ಹಾಗೂ ಗುರುಬಚನ್‌ ಸಿಂಗ್‌ ಭುಲ್ಲರ್‌ ಅವರುಗಳು ೨೦೧೯ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಅಧ್ಯಕ್ಷ, ನಾಡೋಜ ಹಂಪ ನಾಗರಾಜಯ್ಯ ಅವರಿದ್ದ ಆಯ್ಕೆ ಸಮಿತಿ ಪುರಸ್ಕಾರಕ್ಕಾಗಿ ಈ ಇಬ್ಬರು ಸಾಹಿತಿಗಳನ್ನು ಆಯ್ಕೆ ಮಾಡಿದೆ.

ಪ್ರಶಸ್ತಿಯು ಲಕ್ಷ ರೂ. ನಗದು, ಬೆಳ್ಳಿ ಪದಕಗಳನ್ನು ಒಳಗೊಂಡಿರಲಿದ್ದು  2019 ಡಿಸೆಂಬರ್‌ 29ರಂದು ಕುಪ್ಪಳಿಯಲ್ಲಿನಡೆಯುವ ಕುವೆಂಪು ಜನ್ಮದಿನೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ನೆರವೇರಲಿದೆ.

ಅಜೀತ್‌ ಕೌರ್‌ 

೧೯೩೪, ನವೆಂಬರ್ ೧೬ರಂದು ಅಂದಿನ ಭಾರತದ ಭಾಗವಾಗಿದ್ದ ಲಾಹೋರ್ ನಲ್ಲಿ ಜನಿಸಿರುವ ಅಜೀತ್‌ ಕೌರ್‌ ಪಂಜಾಬಿ ಭಾಷೆಯ ಖ್ಯಾತ ಬರಹಗಾರ್ತಿ, ಕವಿ, ಕಾದಂಬರಿಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ.ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿರುವ ಈಕೆ ಕೇಂದ್ರ ಸಾಹಿತ್ಯ ಅಕಾಡೆಮಿ, ಪದ್ಮಶ್ರೀ ಸೇರಿದಂತೆ ಅನೇಕ ಪ್ರಶಸ್ತಿಗಳ ಗೌರವಕ್ಕೆ ಪಾತ್ರರಾಗಿದ್ದಾರೆ. ಇದೀಗ ಫೌಂಡೇಷನ್‌ ಆಫ್‌ ಸಾರ್ಕ್ ರೈಟರ್ಸ್ ಆ್ಯಂಡ್‌ ಲಿಟರೇಚರ್‌ ಸಂಸ್ಥೆ ಅಧ್ಯಕ್ಷರಾಗಿ, ಅಕಾಡೆಮಿ ಆಫ್‌ ಪೈನ್‌ ಆರ್ಟ್ಸ್ ಆ್ಯಂಟ್‌ ಲಿಟರೇಚರ್‌ ಸಂಸ್ಥೆ ಮುಖ್ಯಸ್ಥರಾಗಿ, ಇಂಡಿಯನ್‌ ಕೌನ್ಸಿಲ್‌ ಫಾರ್‌ ಪಾವರ್ಟಿ ಆಲಿವಿಯೇಷನ್‌ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ಕಾರ‍್ಯನಿರ್ವಹಿಸುತ್ತಿದ್ದಾರೆ.

ಗುರುಬಚನ್‌ ಸಿಂಗ್‌ ಭುಲ್ಲರ್‌ 

೧೯೩೭ ಮಾರ್ಚ್ ೧೮ರ<ದು ಜನಿಸಿದ ಗುರುಬಚನ್‌ ಸಿಂಗ್‌ ಭುಲ್ಲರ್‌ ಪಂಜಾಬಿ ಕಥಾ ಸಾಹಿತ್ಯಲೋಕದ ಪ್ರಸಿದ್ದ ಹೆಸರು. ಸೋವಿಯತ್‌ ರಷ್ಯಾ ರಾಯಭಾರ ಕಚೇರಿಯಲ್ಲಿಸೇವೆ ಸಲ್ಲಿಸಿರುವ ಇವರು ಪಂಜಾಬಿ ಟ್ರಿಬ್ಯೂನ್‌ ಪತ್ರಿಕೆ ಸಂಪಾದಕರಾಗಿ ಸಂಪಾದಕೀಯ ಲೇಖನಗಳಿಗೂ ಸಾಹಿತ್ಯದ ಲೇಪವನ್ನು ನೀಡಿದ್ದರು. "ಅಗ್ನಿ ಕಲಾಸ್", "ಓಪ್ರಾ ಮಾರ್ಡ್", "ವಕ್ತಾನ್ ದೊರೆ" ಮೊದಲಾದವು ಇವರ ಪ್ರಸಿದ್ದ ಕೃತಿಗಳಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿ ಅನೇಕ ಪ್ರಶಸ್ತಿ ಪುರಸ್ಕಾರಕ್ಕೆ ಬಾಜನವಾಗಿರುವ ಇವರಿಗೆ ಈ ಸಾಲಿನ ಕುವೆಂಪು ಪುರಸ್ಕಾರ ಲಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT