ಮೃತ ಯುವಕರು 
ರಾಜ್ಯ

ಬೆಂಗಳೂರು: ಬರ್ತ್ ಡೇ ಪಾರ್ಟಿ ನಂತರ ಇಬ್ಬರ ಸಾವು; ಗಾಂಜಾ ಸೇವನೆ ಶಂಕೆ

ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವನೆ ಮಾಡಿದ್ದರಿಂದ ಯುವಕರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಬೆಂಗಳೂರು: ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವನೆ ಮಾಡಿದ್ದರಿಂದ ಯುವಕರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಅಭಿಲಾಷ್​, ಗೋಪಿ ಎಂಬ ಯುಕವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದು, ಸುಮನ್ ಅಲಿಯಾಸ್ ಚಿಟ್ಟೆ ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 

ಮಲ್ಲೇಶ್ವರಂ ಕೋದಂಡರಾಮಪುರದಲ್ಲಿ ಈ ಘಟನೆ ನಡೆದಿದೆ. ಪಾರ್ಟಿ ಮುಗಿಸಿ ಬಂದ ಅಭಿಲಾಷ್, ಗೋಪಿ ದುರ್ಮರಣ ಹೊಂದಿದ್ದು, ಮತ್ತೊಬ್ಬ ಯುವಕ ಕೂಡ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದ ಚಿಟ್ಟೆ ಅಲಿಯಾಸ್ ಸುಮನ್ ಸೇರಿದಂತೆ 6 ಮಂದಿ ಯುವಕರ ಸ್ಥಿತಿ ಗಂಭೀರವಾಗಿದೆ.

ಈ ಯುವಕರು ಮಂಗಳವಾರ ಗೆಳೆಯನ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದರು. ಹುಟ್ಟುಹಬ್ಬದ ಸೆಲೆಬ್ರೇಷನ್ ಅಂತ ಯುವಕರು ಗಾಂಜಾ ಸೇವನೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ತಡರಾತ್ರಿವರೆಗೂ ಪಾರ್ಟಿ ಮಾಡಿ ಮನೆಗೆ ತೆರೆಳಿದ್ದ ಯುವಕರು ಅಸ್ವಸ್ಥಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಈ ಯುವಕರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಈ ಸಂಬಂಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಯಲ್ಲಿ ಸಾವಿನ ರಹಸ್ಯ ಹೊರಬೀಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT