ಕಟೀಲ್ ಮತ್ತು ಯಡಿಯೂರಪ್ಪ 
ರಾಜ್ಯ

ಉಪಚುನಾವಣೆ ಸಮರ: 15 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಎಂ ಯಡಿಯೂರಪ್ಪ, ಕಟೀಲ್ ಪ್ರಚಾರ

ಪ್ರತಿಷ್ಠೆಯ ಕಣವಾಗಿರುವ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ 15 ಕ್ಷೇತ್ರಗಳಲ್ಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನ.23 ರಿಂದ ಪ್ರಚಾರ ಆರಂಭಿಸಲಿದ್ದಾರೆ. 

ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ 15 ಕ್ಷೇತ್ರಗಳಲ್ಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನ.23 ರಿಂದ ಪ್ರಚಾರ ಆರಂಭಿಸಲಿದ್ದಾರೆ. 

ಉಪಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಚುನಾವಣಾ ಸಿದ್ಧತೆ ಕುರಿತು ಚರ್ಚೆ ನಡೆಸಲಾಗಿದೆ. 

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಿಜೆಪಿಗೆ ಅಳಿವು-ಉಳಿವಿನ ಪ್ರಶ್ನೆಯಾಗಿದ್ದು, ಹೀಗಾಗಿ 15 ವಿಧಾನಸಭಾ ಕ್ಷೇತ್ರಗಳಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಬಿ.ಶ್ರೀರಾಮುಲು ಅವರು ಪ್ರಚಾರ ಕಾರ್ಯ ನಡೆಸಲಿದ್ದಾರೆ. 

ಪ್ರಚಾರ ಕಾರ್ಯಗಳ ಕುರಿತ ವೇಳಾಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಲಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. 

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕುರಿತು ಇದೇ ವೇಳೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಬಂಡಾಯ ಶಾಸಕ ಶರತ್ ಬಚ್ಚೇಗೌಡ ಅವರು ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಹಿಂಪಡೆಯುವಂತೆ ಈ ಹಿಂದೆ ಶರತ್ ಬಚ್ಚೇಗೌಡ ಅವರಿಗೆ ಸೂಚಿಸಲಾಗಿತ್ತು. ಆದರೆ, ಅವರು ನಾಮಪತ್ರ ಹಿಂಪಡೆಯಲಿಲ್ಲ. ಹೀಗಾಗಿ ಪಕ್ಷ ಅವರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಎಂಎಲ್'ಸಿ ಅಶ್ವತ್ಥ್ ನಾರಾಯಣ ಗೌಡ ಅವರನ್ನು ಹೊಸಕೋಟೆ ಉಸ್ತುವಾರಿ ನೀಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಈ ಹಿಂದೆ ಅಶ್ವತ್ಥ್ ನಾರಾಯಣ ಗೌಡ ಅವರಿಗೆ ಯಶವಂತಪುರದ ಜವಾಬ್ದಾರಿಯನ್ನು ನೀಡಲಾಗಿತ್ತು. ಹೊಸಕೋಟೆಯಲ್ಲಿ ಒಕ್ಕಲಿಗರ ಸಂಖ್ಯೆ ಹೆಚ್ಚಾಗಿದ್ದು, ಒಕ್ಕಲಿಗರ ಸೆಳೆಯಲು ಇದೀಗ ಅಶ್ವತ್ಥ್ ನಾರಾಯಣ ಅವರಿಗೆ ಹೊಸಕೋಟೆ ಉಸ್ತುವಾರಿ ನೀಡಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT