ಕ್ರಿಕೆಟ್ ವಿಚಾರವಾಗಿ ನಡೆದ ಜಗಳಕ್ಕೆ ವಿದ್ಯಾರ್ಥಿ ಜೀವವೇ ಹೋಯ್ತು! 
ರಾಜ್ಯ

ಕ್ರಿಕೆಟ್ ವಿಚಾರವಾಗಿ ನಡೆದ ಜಗಳಕ್ಕೆ ವಿದ್ಯಾರ್ಥಿ ಜೀವವೇ ಹೋಯ್ತು!

ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ‌ ನಂದಿನಿ ಲೇಔಟ್‍ನ ಸರಸ್ವತಿಪುರದಲ್ಲಿ ನಡೆದಿದೆ.

ಬೆಂಗಳೂರು: ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ‌ ನಂದಿನಿ ಲೇಔಟ್‍ನ ಸರಸ್ವತಿಪುರದಲ್ಲಿ ನಡೆದಿದೆ.

20 ವರ್ಷದ ಉಮಾ ಮಹೇಶ್ವರ ಕೊಲೆಯಾದ ವಿದ್ಯಾರ್ಥಿ.
`
ನವರಂಗ್ ಬಳಿಯ ಎಂಇಎಸ್ ಕಾಲೇಜಿನಲ್ಲಿ ಬಿಬಿಎಂ ಪದವಿ ಓದುತ್ತಿದ್ದ ಗಣೇಶ ಬ್ಲಾಕ್‌ನ ಉಮಾಮಹೇಶ್ವನನ್ನು ಕೊಲೆಗೈದ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ

ಕಳೆದೆರಡು ದಿನಗಳ ಹಿಂದೆ ಕ್ರಿಕೆಟ್ ಆಡುವ ವಿಚಾರದಲ್ಲಿ ಸ್ನೇಹಿತರೊಡನೆ ಉಮಾಮಹೇಶ್ವರ್ ಜಗಳವಾಡಿ ಓರ್ವನ ಕೆನ್ನೆಗೆ ಬಲವಾಗಿ ಹೊಡೆದಿದ್ದ. ಅದಾಗ ಅವನ ಸ್ನೇಹಿತರು ಜಗಳ ಬಿಡಿಸಿ ಬುದ್ದಿ ಹೇಳಿ ಹಿಂದೆ ಕಳಿಸಿದ್ದರು.

ಆದರೆ ಕೆನ್ನೆಗೆ ಬಾರಿಸಿಕೊಂಡ ಸ್ನೇಹಿತ ಮಾತ್ರ ದ್ವೇಷದಿಂದ ಕಾಯುತ್ತಿದು ಮಂಗಳವಾರ ಸಂಜೆ ಏಳರ ಏಳೆ ಮೂವರು ಸ್ನೇಹಿತರ ಗುಂಪಿನೊಡನೆ ಹ್ಗಣೇಶ ಬ್ಲಾಕ್ ನಲ್ಲಿ ಉಮಾಮಹೇಶ್ವರನೊಂದಿಗೆ ಜಗಳ ತೆಗೆದಿದ್ದಾನೆ. ಆಗ ಜಗಳ ವಿಕೋಪಕ್ಕೆ ತಿರುಗಿ ಉಮಾಮಹೇಶ್ವರನ ಕಿಬ್ಬೊಟ್ಟೆಗೆ ಚಾಕುವಿನಿಂದ ಚುಚ್ಚಲಾಗಿದೆ. ಸ್ಥಳೀಯರು ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲ ನೀಡದೆ ಆತ ಮೃತಪಟ್ಟಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT