ಪಶ್ಚಿಮ ಘಟ್ಟ 
ರಾಜ್ಯ

ಇಂಗಾಲ ಹೊರಸೂಸುವಿಕೆ, ಪಶ್ಚಿಮ ಘಟ್ಟಗಳ ಅರಣ್ಯ ನಾಶಗಳಿಂದ ಕರ್ನಾಟಕ, ಕೇರಳಗಳಲ್ಲಿ ಪ್ರವಾಹ: ಅಧ್ಯಯನ 

ಬೃಹತ್ ಪ್ರಮಾಣದಲ್ಲಿ ಅರಣ್ಯ ನಾಶ ಮತ್ತು ಇಂಗಾಲದ ರಾಸಾಯನಿಕ ವಸ್ತುಗಳನ್ನು ಸರಿಯಾಗಿ ಬೇರ್ಪಡಿಸದೇ ಇರುವುದು ಕಳೆದ ಎರಡು ವರ್ಷಗಳಿಂದೀಚೆಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಉಂಟಾಗುತ್ತಿರುವ ಭಾರೀ ಪ್ರವಾಹಕ್ಕೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಬೆಂಗಳೂರು: ಬೃಹತ್ ಪ್ರಮಾಣದಲ್ಲಿ ಅರಣ್ಯ ನಾಶ ಮತ್ತು ಇಂಗಾಲದ ರಾಸಾಯನಿಕ ವಸ್ತುಗಳನ್ನು ಸರಿಯಾಗಿ ಬೇರ್ಪಡಿಸದೇ ಇರುವುದು ಕಳೆದ ಎರಡು ವರ್ಷಗಳಿಂದೀಚೆಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಉಂಟಾಗುತ್ತಿರುವ ಭಾರೀ ಪ್ರವಾಹಕ್ಕೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ.


ಇಂಗಾಲದ ರಾಸಾಯನಿಕ ಬೇರ್ಪಡಿಸುವಿಕೆ(ಕಾರ್ಬನ್ ಸೀಕ್ವೆಸ್ಟ್ರೇಷನ್) ಒಂದು ನೈಸರ್ಗಿಕ/ಕೃತಕ ಪ್ರಕ್ರಿಯೆಯಾಗಿದ್ದು ಇದರ ಮೂಲಕ ಕಾರ್ಬನ್ ಡೈಆಕ್ಸೈಡನ್ನು ವಾತಾವರಣದಿಂದ ತೆಗೆದುಹಾಕಿ ಘನ ಅಥವಾ ದ್ರವ ರೂಪದಲ್ಲಿ ಪಡೆಯುವುದಾಗಿದೆ.


ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧಕರು ಇತ್ತೀಚೆಗೆ ನೀಡಿರುವ ಅಧ್ಯಯನ ವರದಿಯಲ್ಲಿ, ಬಹುತೇಕ ಅರಣ್ಯಗಳ ನಾಶದಿಂದ ಶೇಕಡಾ 20ರಿಂದ 25ರಷ್ಟು ಮಾನವಜನ್ಯ (ಮಾನವ-ಸಂಬಂಧಿತ) ಇಂಗಾಲದ ಹೊರಸೂಸುವಿಕೆಗೆ ಕಾರಣವಾಗುತ್ತದೆ, ಇದರಿಂದ ಹವಾಮಾನ ಬದಲಾವಣೆಯುಂಟಾಗುತ್ತದೆ. ಅರಣ್ಯಗಳ ನಾಶದಿಂದ ಸ್ಥಳೀಯ ಮಳೆಸುರಿಯುವ ಪ್ರಮಾಣದಲ್ಲಿ ಕೂಡ ಬದಲಾವಣೆಯಾಗುತ್ತದೆ.


ಅಧ್ಯಯನದಲ್ಲಿ ಕರ್ನಾಟಕ ಮತ್ತು ಕೇರಳ ಭಾಗದ ಪಶ್ಚಿಮ ಘಟ್ಟದ ದಕ್ಷಿಣ ಭಾಗಗಳಲ್ಲಿ ಅಧಿಕ ಪ್ರಮಾಣದಲ್ಲಿ ಹವಾಮಾನ ಬದಲಾವಣೆಯಾಗುತ್ತದೆ. ಮಧ್ಯ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉಷ್ಣಾಂಶ ಬದಲಾವಣೆಯಾಗುತ್ತಿದ್ದು ಮಳೆ ಬೀಳುವ ಪ್ರಮಾಣ ಜಾಸ್ತಿಯಾಗಿ ಕೇವಲ ಎರಡು ದಿನಗಳಲ್ಲಿ 100 ಮಿಲಿ ಮೀಟರ್ ನಷ್ಟು ಮಳೆ ಹೆಚ್ಚಾಗಿ ಸುರಿಯುತ್ತಿದೆ. ಪಶ್ಚಿಮ ಘಟ್ಟದ ಉತ್ತರ ಭಾಗದ ಅಕ್ಷಾಂಶದಲ್ಲಿ ಉಷ್ಣಾಂಶ 0.5ರಷ್ಟು ಹೆಚ್ಚಾಗಿದ್ದು ಮಳೆಯ ಪ್ರಮಾಣ 100 ಮಿಲಿ ಮೀಟರ್ ನಿಂದ 250 ಮಿಲಿ ಮೀಟರ್ ನಷ್ಟು ಕೇವಲ ನಾಲ್ಕು ದಿನಗಳಲ್ಲಿ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT