ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹುಟ್ಟುಹಬ್ಬದಂದು ಮಾದಕ ವಸ್ತು ಸೇವಿಸಿ ಇಬ್ಬರ ಸಾವು, ಮೆಡಿಕಲ್ ಸ್ಟೋರ್ ಮಾಲೀಕನ ಬಂಧನ

ಹುಟ್ಟು ಹಬ್ಬದ ಸಂದರ್ಭದಲ್ಲಿ ಮಾದಕ ವಸ್ತುಗಳ ಜೊತೆಗೆ ಮತ್ತು ಬರುವ ಮಾತ್ರೆ ಸೇವಿಸಿ ಇಬ್ಬರು ಯುವಕರು ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಮಾತ್ರೆ ನೀಡಿದ ಮೆಡಿಕಲ್ ಸ್ಟೋರ್‌....

ಬೆಂಗಳೂರು: ಹುಟ್ಟು ಹಬ್ಬದ ಸಂದರ್ಭದಲ್ಲಿ ಮಾದಕ ವಸ್ತುಗಳ ಜೊತೆಗೆ ಮತ್ತು ಬರುವ ಮಾತ್ರೆ ಸೇವಿಸಿ ಇಬ್ಬರು ಯುವಕರು ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಮಾತ್ರೆ ನೀಡಿದ ಮೆಡಿಕಲ್ ಸ್ಟೋರ್‌ ಮಾಲೀಕನನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.

ರಾಜಾಜಿನಗರದ ಮನ್‌ದೀಪ್ ಫಾರ್ಮಾ ಮೆಡಿಕಲ್ ಸ್ಟೋರ್‌ನ ಮಾಲೀಕ ಮನೀಷ್ ಕುಮಾರ್(36) ಬಂಧಿತ ಆರೋಪಿ.

ರಾಜಾಜಿನಗರದ 4ನೇ ಬ್ಲಾಕ್‌ನ ನಿವಾಸಿಯಾಗಿದ್ದ ಮನೀಷ್ ಕುಮಾರ್, ಮೋದಿ ಆಸ್ಪತ್ರೆಯ ಸಿಗ್ನಲ್ ಬಳಿ ಮನ್‌ದೀಪ್ ಫಾರ್ಮಾ ಎಂಬ ಔಷಧಿ ಅಂಗಡಿ ನಡೆಸುತ್ತಿದ್ದ. ಕಾನೂನುಬಾಹಿರವಾಗಿ ಟೈಡಾಲ್ ಮಾತ್ರೆಗಳನ್ನು ಖರೀದಿಸಿ ಮಾರಾಟ ಮಾಡಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೈಡಾಲ್ ಮಾತ್ರೆಯನ್ನು ಪುಡಿಮಾಡಿಕೊಂಡು ಸಿರಂಜ್‌ಗೆ ಡಿಸ್ಟಲ್ ವಾಟರ್‌ಗೆ ಸೇರಿಸಿ ಸಿರಂಜ್‌ಗೆ ತುಂಬಿಸಿಕೊಂಡು ನಶೆ ಬರಲು ಚುಚ್ಚಿಕೊಂಡಿದ್ದ ಕೋದಂಡರಾಮಪುರದ ಅಭಿಲಾಷ್ ಹಾಗೂ ಗೋಪಿ ಮೃತಪಟ್ಟಿದ್ದಾರೆ.

‘ಅತಿಯಾದ ಪ್ರಮಾಣದಲ್ಲಿ ಮಾದಕ ವಸ್ತು ಸೇವಿಸಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ. ಪ್ರಕರಣವನ್ನು ಮುಚ್ಚಿ ಹಾಕಲು ಯತ್ನ ನಡೆಯುತ್ತಿದೆ. ಉಪ ಮುಖ್ಯಮಂತ್ರಿ ಪ್ರತಿನಿಧಿ ಸುವ ಕ್ಷೇತ್ರದಲ್ಲೇ ಮಾದಕ ವಸ್ತು ಮಾರಾಟ ಅವ್ಯಾಹತವಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ, ಸ್ಥಳೀಯರ ಆರೋಪವನ್ನು ಪೊಲೀಸರು ‌ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT