ಸಂಗ್ರಹ ಚಿತ್ರ 
ರಾಜ್ಯ

ರಾಜ್ಯ ಸರ್ಕಾರದಿಂದ 2020 ರ ಸಾರ್ವಜನಿಕ ರಜಾದಿನಗಳ ಪಟ್ಟಿ ಬಿಡುಗಡೆ

 ಕರ್ನಾಟಕ ಸರ್ಕಾರ 2020 ರ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಶುಕ್ರವಾರ ಪ್ರಕಟಗೊಂಡಿರುವ ಈ ಪಟ್ಟಿ 1881 ರ ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯಂತೆ ರಜಾ ದಿನಗಳ ನಿಗದಿ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ 2020 ರ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಶುಕ್ರವಾರ ಪ್ರಕಟಗೊಂಡಿರುವ ಈ ಪಟ್ಟಿ 1881 ರ ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯಂತೆ ರಜಾ ದಿನಗಳ ನಿಗದಿ ಮಾಡಲಾಗಿದೆ.

ಪಟ್ಟಿಯಲ್ಲಿ ಒಇರುವ ರಜಾದಿನಗಳು ಸರ್ಕಾರಿ ಕಚೇರಿಗಳು ಮತ್ತು ಬ್ಯಾಂಕುಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆಳಿಗೆ 18 ಸಾರ್ವಜನಿಕ ರಜಾದಿನಗಳಿವೆ. ಸೋಮವಾರ ಅಥವಾ ಶುಕ್ರವಾರದಂದು ಬರುವ 10 ರಜಾದಿನಗಳನ್ನು ಇದು ಹೊಂದಿರುವ ಕಾರಣ  2020 ರಲ್ಲಿ ದೀರ್ಘ ವಾರಾಂತ್ಯವನ್ನು ನಿರೀಕ್ಷಿಸಲಾಗಿದೆ.

ಕರ್ನಾಟಕದ ರಜಾದಿನಗಳ ಪಟ್ಟಿ ಇಲ್ಲಿದೆ:

ಜನವರಿ 15 (ಬುಧವಾರ) - ಮಕರ ಸಂಕ್ರಾಂತಿ
ಫೆಬ್ರವರಿ 21 (ಶುಕ್ರವಾರ) - ಶಿವರಾತ್ರಿ
ಮಾರ್ಚ್ 21 (ಬುಧವಾರ) - ಯುಗಾದಿ
ಏಪ್ರಿಲ್ 6 (ಸೋಮವಾರ) - ಮಹಾವೀರ ಜಯಂತಿ
ಏಪ್ರಿಲ್ 10 (ಶುಕ್ರವಾರ) - ಶುಭ ಶುಕ್ರವಾರ (ಗುಡ್ ಫ್ರೈಡೆ)
ಏಪ್ರಿಲ್ 14 (ಮಂಗಳವಾರ) - ಅಂಬೇಡ್ಕರ್ ಜಯಂತಿ
ಮೇ 1 (ಶುಕ್ರವಾರ) - ಮೇ ದಿನ
ಮೇ 25 (ಸೋಮವಾರ) - ಖುತ್ಬಾ-ಎ-ರಂಜಾನ್
ಆಗಸ್ಟ್ 1 (ಶನಿವಾರ) - ಬಕ್ರೀದ್
ಆಗಸ್ಟ್ 15 (ಶನಿವಾರ) - ಸ್ವಾತಂತ್ರ್ಯ ದಿನ
ಸೆಪ್ಟೆಂಬರ್ 15 (ಗುರುವಾರ) - ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 2 (ಶುಕ್ರವಾರ) - ಗಾಂಧಿ ಜಯಂತಿ
ಅಕ್ಟೋಬರ್ 26 (ಸೋಮವಾರ) - ವಿಜಯದಶಮಿ
ಅಕ್ಟೋಬರ್ 30 (ಶುಕ್ರವಾರ) - ಈದ್ ಮಿಲಾದ್
ಅಕ್ಟೋಬರ್ 31 (ಶನಿವಾರ) - ವಾಲ್ಮೀಕಿ ಜಯಂತಿ
ನವೆಂಬರ್ 16 (ಸೋಮವಾರ) - ದೀಪಾವಳಿ
ಡಿಸೆಂಬರ್ 3 (ಗುರುವಾರ) - ಕನಕದಾಸ ಜಯಂತಿ
ಡಿಸೆಂಬರ್ 25 (ಶುಕ್ರವಾರ) - ಕ್ರಿಸ್‌ಮಸ್

ಇನ್ನು ಗಣರಾಜ್ಯೋತ್ಸವ (ಜನವರಿ 26), ಬಸವ ಜಯಂತಿ (ಏಪ್ರಿಲ್ 26), ಮೊಹರಂ (ಆಗಸ್ಟ್ 8), ಮಹಾನವಮಿ, ಆಯುಧ ಪೂಜೆ  (ಅಕ್ಟೋಬರ್ 26) ಮತ್ತು ಕನ್ನಡ ರಾಜ್ಯೋತ್ಸವ (ನವೆಂಬರ್ 1) ಗಳು ಭಾನುವಾರದಂದು ಇರಲಿದೆ. ನರಕ ಚತುರ್ದಶಿ (ನವೆಂಬರ್ 14)  ಎರಡನೇ ಶನಿವಾರ ಬಂದರೆ ಗಣೇಶ್ ಚತುರ್ಥಿ (ಆಗಸ್ಟ್ 22). ನಾಲ್ಕನೇ ಶನಿವಾರದಂದು ಬರಲಿದೆ.

ಕೈಲ್ ಮುಹೂರ್ತ (ಸೆಪ್ಟೆಂಬರ್ 3), ತುಲಾ ಸಂಕ್ರಮಣ (ಅಕ್ಟೋಬರ್ 17) ಮತ್ತು ಹುತ್ತರಿ (ಡಿಸೆಂಬರ್ 1) ಗೆ ಕೊಡಗು ಜಿಲ್ಲೆಗೆ ಕರ್ನಾಟಕ ಸರ್ಕಾರ ಸ್ಥಳೀಯ ರಜಾದಿನವನ್ನು ಘೋಷಿಸಿದೆ.

ಶಾಲೆಗಳು ಮತ್ತು ಕಾಲೇಜುಗಳಿಗೆ ಸರ್ಕಾರಿ ರಜಾದಿನಗಳ ಪ್ರತ್ಯೇಕ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಆಯುಕ್ತರು ಬಿಡುಗಡೆ ಮಾಡುತ್ತಾರೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT