ರಾಜ್ಯ

ಕಲಬುರಗಿ: ಬಂಡಾಯ ಸಾಹಿತಿ ಚನ್ನಣ್ಣ ವಾಲೀಕಾರ ನಿಧನ

Lingaraj Badiger

ಕಲಬುರಗಿ: ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾಣ ಕರ್ನಾಟಕ ನಾಡಿನ ಬಂಡಾಯ ಸಾಹಿತಿ ಡಾ. ಚನ್ನಣ್ಣ ವಾಲೀಕಾರ(78) ಅವರು ಭಾನುವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಾಲೀಕಾರ ಅವರು ಎರಡು ವರ್ಷದ ಹಿಂದೆ ಲಿವರ್‌ ಕ್ಯಾನ್ಸರ್‌ ಆಗಿತ್ತು. ಅಂದಿನಿಂದ ಅವರು ನಿರಂತರ ಚಿಕಿತ್ಸೆಯಲ್ಲಿದ್ದರು. ಒಂದು ವರ್ಷದಿಂದ ಅವರ ಆರೋಗ್ಯ ಕ್ಷೀಣಿಸುತ್ತ ಸಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

1943ರ ಏಪ್ರಿಲ್‌ 6ರಂದು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಶಂಕರವಾಡಿ ಗ್ರಾಮದಲ್ಲಿ ಅವರು ಜನಿಸಿದ ಅವರು, ಪ್ರೌಢಶಾಲೆ ಶಿಕ್ಷಕರಾಗಿ, ಕಾಲೇಜು ಉಪನ್ಯಾಸಕರಾಗಿ, ಗುಲಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರವಾಚಕರಾಗಿ, ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಮುಂಬೈ, ಹೈದರಾಬಾದ್‌, ಹಂಪಿ, ಬೆಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗದಲ್ಲಿ ಇರುವ ವಿಶ್ವವಿದ್ಯಾಲಯಗಳಲ್ಲಿಯೂ ಗ್ರಂಥಾಲಯ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದಾರೆ. ಹೀಗಾಗಿ ರಾಜ್ಯದ ಮೂಲೆಮೂಲೆಯಲ್ಲೂ ಅವರ ಶಿಷ್ಯಬಳಗ, ಓದುಗ ಅಭಿಮಾನಿಗಳು ಇದ್ದಾರೆ.

ಚನ್ನಣ್ಣ ವಾಲೀಕಾರ ಅವರು ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಹತ್ತಾರು ಪ್ರಬಂಧಗಳು, ನಾಲ್ಕು ಮಹಾಕಾವ್ಯಗಳು, 11 ಕವನ ಸಂಕನಲಗಳು, 12 ನಾಟಕಗಳು, 4 ಜನಪದ ಸಂಪ್ರಬಂಧಗಳು, 5 ಕಾದಂಬರಿಗಳು, ಬೆಳ್ಯಾ ಎಂಬ ಅದ್ವಿತೀಯ ಕಾದಂಬರಿ ಮೂಲಕ ಕನ್ನಡ ಸಾಹಿತ್ಯಲೋಕವನ್ನು ಬೆಚ್ಚಿಬೀಳಿಸಿದ್ದ ಅವರು, ವ್ಯೋಮಾವ್ಯೋಮ ಮಹಾಕಾವ್ಯದ ಮೂಲಕ ಅವರು ಮನೆಮಾತಾಗಿದ್ದರು.

SCROLL FOR NEXT