ಕಾಡು ಪ್ರಾಣಿಗಳು ನಾಡಿಗೆ ನುಗ್ಗುವುದನ್ನು ತಪ್ಪಿಸಲು ಅರಣ್ಯ ಇಲಾಖೆ ಪ್ಲಾನ್​ 
ರಾಜ್ಯ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಕಾಡು ಪ್ರಾಣಿಗಳು ನಾಡಿಗೆ ನುಗ್ಗುವುದನ್ನು ತಪ್ಪಿಸಲು ಅರಣ್ಯ ಇಲಾಖೆ ಪ್ಲಾನ್​

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದಲ್ಲಿ ಬೆಂಕಿಗೆ ಆಹುತಿಯಾಗಿದ್ದ ಪ್ರದೇಶದಲ್ಲಿ ಹುಲ್ಲು ಬೆಳೆಸಲು ಅರಣ್ಯ ಇಲಾಖೆ ಮುಂದಾಗಿದೆ.

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದಲ್ಲಿ ಬೆಂಕಿಗೆ ಆಹುತಿಯಾಗಿದ್ದ ಪ್ರದೇಶದಲ್ಲಿ ಹುಲ್ಲು ಬೆಳೆಸಲು ಅರಣ್ಯ ಇಲಾಖೆ ಮುಂದಾಗಿದೆ.

ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದಲ್ಲಿ ಬೆಂಕಿಗಾಹುತಿಯಾಗಿದ್ದ ಪ್ರದೇಶದಲ್ಲಿ ಹುಲ್ಲು ಬೆಳೆಸಲು ಅರಣ್ಯ ಇಲಾಖೆ ಮುಂದಾಗಿದೆ. ಕಾಡಿನಲ್ಲಿ ಕಳೆಗಿಡ ಹಾಗೂ ಲಂಟೆನಾಗಳು ಬೆಳೆದು ಕಾಡು ಪ್ರಾಣಿಗಳಿಗೆ ಮೇವಿನ ಕೊರತೆಯಿಂದ ರೈತರ ಜಮೀನಿಗೆ ಮತ್ತು ಗ್ರಾಮೀಣ ಪ್ರದೇಶಗಳಿಗೆ ಲಗ್ಗೆ ಇಡುವುದನ್ನು ತಪ್ಪಿಸುವ ಮಾರ್ಗೋಪಾಯಕ್ಕಾಗಿ ಹುಲ್ಲು ಬೆಳೆಸಲು ಇಲಾಖೆ ಮುಂದಾಗಿದೆ.

ಕಾಡಿನಲ್ಲಿ ಕಳೆಗಿಡ ಹಾಗೂ ಲಂಟೆನಾಗಳು ಬೆಳೆದು ಕಾಡು ಪ್ರಾಣಿಗಳಿಗೆ ಮೇವಿನ ಕೊರತೆಯಿಂದ ರೈತರ ಜಮೀನಿಗೆ ಮತ್ತು ಗ್ರಾಮೀಣ ಪ್ರದೇಶಗಳಿಗೆ ಲಗ್ಗೆ ಇಡುವುದನ್ನು ತಪ್ಪಿಸುವ ಮಾರ್ಗೋಪಾಯಕ್ಕಾಗಿ ಹುಲ್ಲು ಬೆಳೆಸಲು ಇಲಾಖೆ ಮುಂದಾಗಿದೆ.

ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಬೋಳಗುಡ್ಡ ವ್ಯಾಪ್ತಿಯಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಆಹಾರವಾಗಬಲ್ಲ ಹುಲ್ಲುಗಾವಲು ಬೆಳೆಸಲು ಉದ್ದೇಶಿಸಲಾಗಿದ್ದು ಇದಕ್ಕಾಗಿ ಲಂಟಾನವನ್ನು ತೆರವುಗೊಳಿಸಲಾಗುತ್ತಿದೆ ಈ ಮೂಲಕ ಕಾಡು ಪ್ರಾಣಿಗಳಿಗೆ ಬೇಕಾದ ಹುಲ್ಲುಗಾವಲು ಬೆಳೆಯಲು ನೆರವಾಗಲಿದ್ದು ಆನೆ, ಜಿಂಕೆ, ಸಾರಂಗ, ಕಡವೆಗೆ ಆಹಾರವೂ ಸಿಗಲಿದೆ.

ಜೊತೆಗೆ ಮಾಂಸಹಾರಿ ಪ್ರಾಣಿಗಳಿಗೆ ಬಲಿ ಪ್ರಾಣಿಗಳೂ ಸಿಗುವುದರಿಂದ ಪ್ರಾಣಿ- ಮಾನವ ಸಂಘರ್ಷಕ್ಕೆ ಸ್ವಲ್ಪಮಟ್ಟಿಗೆ ಕಡಿಮೆ ಆಗುವ ನಿರೀಕ್ಷೆ ಇಲಾಖೆಯದ್ದಾಗಿದೆ.ಈಗಾಗಲೇ ಹುಲ್ಲು ಬೆಳೆಯುವ ಜಾಗದಲ್ಲಿ ಪಾರ್ಥೇನಿಯಂ, ಯೂಪಿಟೋರಿಯಂ, ಲಂಟೆನಾದಂತಹ ಅನಗತ್ಯ ಸಸಿಗಳ ತೆರವು ಮಾಡಲಾಗುತ್ತಿದ್ದು ಫೈರ್ ಲೈನ್ ನೊಂದಿಗೆ ಕೆಲವೆಡೆ ಲಂಟಾನವನ್ನೂ ತೆರವುಗೊಳಿಸಲಾಗುತ್ತಿದೆ.

ವರದಿ :- ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT