ಕಾಡು ಪ್ರಾಣಿಗಳು ನಾಡಿಗೆ ನುಗ್ಗುವುದನ್ನು ತಪ್ಪಿಸಲು ಅರಣ್ಯ ಇಲಾಖೆ ಪ್ಲಾನ್​ 
ರಾಜ್ಯ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಕಾಡು ಪ್ರಾಣಿಗಳು ನಾಡಿಗೆ ನುಗ್ಗುವುದನ್ನು ತಪ್ಪಿಸಲು ಅರಣ್ಯ ಇಲಾಖೆ ಪ್ಲಾನ್​

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದಲ್ಲಿ ಬೆಂಕಿಗೆ ಆಹುತಿಯಾಗಿದ್ದ ಪ್ರದೇಶದಲ್ಲಿ ಹುಲ್ಲು ಬೆಳೆಸಲು ಅರಣ್ಯ ಇಲಾಖೆ ಮುಂದಾಗಿದೆ.

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದಲ್ಲಿ ಬೆಂಕಿಗೆ ಆಹುತಿಯಾಗಿದ್ದ ಪ್ರದೇಶದಲ್ಲಿ ಹುಲ್ಲು ಬೆಳೆಸಲು ಅರಣ್ಯ ಇಲಾಖೆ ಮುಂದಾಗಿದೆ.

ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದಲ್ಲಿ ಬೆಂಕಿಗಾಹುತಿಯಾಗಿದ್ದ ಪ್ರದೇಶದಲ್ಲಿ ಹುಲ್ಲು ಬೆಳೆಸಲು ಅರಣ್ಯ ಇಲಾಖೆ ಮುಂದಾಗಿದೆ. ಕಾಡಿನಲ್ಲಿ ಕಳೆಗಿಡ ಹಾಗೂ ಲಂಟೆನಾಗಳು ಬೆಳೆದು ಕಾಡು ಪ್ರಾಣಿಗಳಿಗೆ ಮೇವಿನ ಕೊರತೆಯಿಂದ ರೈತರ ಜಮೀನಿಗೆ ಮತ್ತು ಗ್ರಾಮೀಣ ಪ್ರದೇಶಗಳಿಗೆ ಲಗ್ಗೆ ಇಡುವುದನ್ನು ತಪ್ಪಿಸುವ ಮಾರ್ಗೋಪಾಯಕ್ಕಾಗಿ ಹುಲ್ಲು ಬೆಳೆಸಲು ಇಲಾಖೆ ಮುಂದಾಗಿದೆ.

ಕಾಡಿನಲ್ಲಿ ಕಳೆಗಿಡ ಹಾಗೂ ಲಂಟೆನಾಗಳು ಬೆಳೆದು ಕಾಡು ಪ್ರಾಣಿಗಳಿಗೆ ಮೇವಿನ ಕೊರತೆಯಿಂದ ರೈತರ ಜಮೀನಿಗೆ ಮತ್ತು ಗ್ರಾಮೀಣ ಪ್ರದೇಶಗಳಿಗೆ ಲಗ್ಗೆ ಇಡುವುದನ್ನು ತಪ್ಪಿಸುವ ಮಾರ್ಗೋಪಾಯಕ್ಕಾಗಿ ಹುಲ್ಲು ಬೆಳೆಸಲು ಇಲಾಖೆ ಮುಂದಾಗಿದೆ.

ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಬೋಳಗುಡ್ಡ ವ್ಯಾಪ್ತಿಯಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಆಹಾರವಾಗಬಲ್ಲ ಹುಲ್ಲುಗಾವಲು ಬೆಳೆಸಲು ಉದ್ದೇಶಿಸಲಾಗಿದ್ದು ಇದಕ್ಕಾಗಿ ಲಂಟಾನವನ್ನು ತೆರವುಗೊಳಿಸಲಾಗುತ್ತಿದೆ ಈ ಮೂಲಕ ಕಾಡು ಪ್ರಾಣಿಗಳಿಗೆ ಬೇಕಾದ ಹುಲ್ಲುಗಾವಲು ಬೆಳೆಯಲು ನೆರವಾಗಲಿದ್ದು ಆನೆ, ಜಿಂಕೆ, ಸಾರಂಗ, ಕಡವೆಗೆ ಆಹಾರವೂ ಸಿಗಲಿದೆ.

ಜೊತೆಗೆ ಮಾಂಸಹಾರಿ ಪ್ರಾಣಿಗಳಿಗೆ ಬಲಿ ಪ್ರಾಣಿಗಳೂ ಸಿಗುವುದರಿಂದ ಪ್ರಾಣಿ- ಮಾನವ ಸಂಘರ್ಷಕ್ಕೆ ಸ್ವಲ್ಪಮಟ್ಟಿಗೆ ಕಡಿಮೆ ಆಗುವ ನಿರೀಕ್ಷೆ ಇಲಾಖೆಯದ್ದಾಗಿದೆ.ಈಗಾಗಲೇ ಹುಲ್ಲು ಬೆಳೆಯುವ ಜಾಗದಲ್ಲಿ ಪಾರ್ಥೇನಿಯಂ, ಯೂಪಿಟೋರಿಯಂ, ಲಂಟೆನಾದಂತಹ ಅನಗತ್ಯ ಸಸಿಗಳ ತೆರವು ಮಾಡಲಾಗುತ್ತಿದ್ದು ಫೈರ್ ಲೈನ್ ನೊಂದಿಗೆ ಕೆಲವೆಡೆ ಲಂಟಾನವನ್ನೂ ತೆರವುಗೊಳಿಸಲಾಗುತ್ತಿದೆ.

ವರದಿ :- ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT