ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅವರ ತಾಯಿ ಗೌರಮ್ಮ ಮತ್ತು ಹೆಂಡತಿ ಉಷಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಡಿ. 4ಕ್ಕೆ ಮುಂದೂಡಿದೆ.
ಇಂದು ನಡೆದ ವಿಚಾರಣೆಯ ವೇಳೆ, ವಾದ ಮಂಡನೆಗೆ ಸಮಯಾವಕಾಶ ಬೇಕೆಂದು ಜಾರಿ ನಿರ್ದೇಶನಾಲಯದ ಪರ ವಕೀಲರು ಮನವಿ ಮಾಡಿಕೊಂಡರು.
ಇದಕ್ಕೆ ಸ್ಪಂದಿಸಿದ ನ್ಯಾ. ಬ್ರಿಜೇಶ್ ಸೇಠಿ ನೇತೃತ್ವದ ಹೈಕೋರ್ಟ್ ನ್ಯಾಯಪೀಠವು ಇಡಿ ವಕೀಲರಿಗೆ ಡಿ. 4ರವರೆಗೂ ಅವಕಾಶ ಮಾಡಿಕೊಟ್ಟಿದೆ.