ಗಂಗಾವತಿಯಲ್ಲಿ ರೈಲಿಗೆ ಮೊದಲ ಬಲಿ: ಗುಜರಾತ್ ಮೂಲದ ಯುವಕ ಸಾವು 
ರಾಜ್ಯ

ಗಂಗಾವತಿಯಲ್ಲಿ ರೈಲಿಗೆ ಮೊದಲ ಬಲಿ: ಗುಜರಾತ್ ಮೂಲದ ಯುವಕ ಸಾವು

ಕಿವಿಯಲ್ಲಿ ಹೆಡ್ಫೋನ್ ಇಟ್ಟುಕೊಂಡು ಸಂಗೀತಾ ಆಲಿಸುತ್ತಾ ಬರುತ್ತಿದ್ದ ಯುವಕನೊಬ್ಬ ಆಯಾತಪ್ಪಿ ರೈಲು ಹಳಿಗೆ ಬಿದ್ದು ಸಾವನ್ನಪ್ಪಿದ್ ಘಟನೆ ನಗರದಲ್ಲಿ ನಡೆದಿದೆ.

ಗಂಗಾವತಿ: ಕಿವಿಯಲ್ಲಿ ಹೆಡ್ಫೋನ್ ಇಟ್ಟುಕೊಂಡು ಸಂಗೀತ ಆಲಿಸುತ್ತಾ ಬರುತ್ತಿದ್ದ ಯುವಕನೊಬ್ಬ ಆಯಾತಪ್ಪಿ ರೈಲು ಹಳಿಗೆ ಬಿದ್ದು ಸಾವನ್ನಪ್ಪಿದ್ ಘಟನೆ ನಗರದಲ್ಲಿ ನಡೆದಿದೆ. ಮೃತನನ್ನು ಗುಜರಾತ್ ರಾಜ್ಯದ ನಂದೆಲಾ ಜಿಲ್ಲೆಯ ದಾವತ್ ಎಂಬ ಗ್ರಾಮದ ವಿಫುಲ್ ತಂದೆ ಭರತ್ (18) ಎಂದು ಗುರುತಿಸಲಾಗಿದೆ. 

ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯ ಕೆಲಸಕ್ಕೆಂದು ಗುಜರಾತಿನ ಹಲವು ಯುವಕರೊಂದಿಗೆ ಬಂದಿದ್ದ ಈ ಯುವಕ, ಬುಧವಾರ ಸಂಜೆ ನಗರದ ಕೊಪ್ಪಳ ರಸ್ತೆಯಲ್ಲಿರುವ ಹಳಿಯನ್ನು ದಾಟಿ ಬಹದರ್ೆಸೆಗೆ ಹೋಗಿದ್ದಾನೆ. ನಿಸರ್ಗದ ಕರೆ ಮುಗಿಸಿ ಕಿವಿಯಲ್ಲಿ ಹೆಡ್ಫೋನ್ ಇಟ್ಟುಕೊಂಡು ಹಳಿ ದಾಟುತ್ತಿರುವಾಗ ಆಕಸ್ಮಿಕ ಆಗಮಿಸಿದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ರೈಲು ಗಂಗಾವತಿಯಿಂದ ಹುಬ್ಬಳ್ಳಿಗೆ ಹೊರಟಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.  

ಗಂಗಾವತಿಯಲ್ಲಿ ರೈಲು ಸೇವೆ ಆರಂಭವಾಗಿ ಒಂಭತ್ತು ತಿಂಗಳಲ್ಲಿ ಇದೇ ಮೊದಲ ಬಾರಿಗೆ ರೈಲಿಗೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT