ಕೋಳಿಪಾಳ್ಯ ಮನೆಯೊಂದರಲ್ಲಿ ಜಿಂಕೆ ಮಾಂಸ ಸಂಗ್ರಹ: ಪರಿಶೀಲನೆ ವೇಳೆ ದಂಪತಿ ಪರಾರಿ! 
ರಾಜ್ಯ

ಕೋಳಿಪಾಳ್ಯ ಮನೆಯೊಂದರಲ್ಲಿ ಜಿಂಕೆ ಮಾಂಸ ಸಂಗ್ರಹ: ಪರಿಶೀಲನೆ ವೇಳೆ ದಂಪತಿ ಪರಾರಿ!

ನಾಗರಾಜ ಎಂಬುವವರ ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿಟ್ಟುಕೊಂಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಲ್ಯದಲ್ಲಿ ನಡೆದಿದೆ‌. ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಿ 4 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದು, ವೃದ್ಧ ದಂಪತಿ ಪರಾರಿಯಾಗಿದ್ದಾರೆ.

ಚಾಮರಾಜನಗರ: ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿಟ್ಟುಕೊಂಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಳ್ಯದಲ್ಲಿ ನಡೆದಿದೆ‌.

ಗ್ರಾಮದ ನಾಗರಾಜ(60) ಎಂಬುವವರ ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿರುವ ಖಚಿತ ಮಾಹಿತಿ ಮೇರೆಗೆ ಬಿಆರ್​ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಿ 4 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ‌. ಈ ವೇಳೆ, ನಾಗರಾಜ ತನ್ನ ಪತ್ನಿಯೊಂದಿಗೆ ಪರಾರಿಯಾಗಿದ್ದಾನೆ.

ವನ್ಯ ಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಶಪಡಿಸಿಕೊಂಡ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳುಬೆಂಕಿಯಲ್ಲಿ ಸುಟ್ಟು ನಾಶಪಡಿಸಿದ್ದಾರೆ. ಪರಾರಿಯಾದ ದಂಪತಿ ಪತ್ತೆಗೆ ಬಲೆ ಬೀಸಲಾಗಿದೆ.

ವರದಿ:- ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ; ಸೆ. 15 ರಿಂದ ರಾಜ್ಯಾದ್ಯಂತ ಹೋರಾಟ

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ: ಗಾಜಾ ಬಗ್ಗೆ ಮೌನ ಏಕೆ?; ಗೋಳಾಡಿದ ಮೊಹಬೂಬಾ ಮುಫ್ತಿ!

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ BRICS; ಭಾರತಕ್ಕೆ ಅತಿ ದೊಡ್ಡ ರಾಜತಾಂತ್ರಿಕ ಗೆಲುವು!