ರಾಜ್ಯ

ಉಡುಪಿ: ಒಂದೇ ಕುಟುಂಬದ ನಾಲ್ವರ ಶವಪತ್ತೆ

Shilpa D

ಉಡುಪಿ: ಮಾನಸಿಕ ಖಿನ್ನತೆಯಿಂದ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷ ಹಾಕಿ ದೇವಸ್ಥಾನದ ಬಾಣಸಿಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಂದಾಪುರದ ಗೋಳಿಯಂಗಡಿಯ ಈ ಘಟನೆ ನಡೆದಿದೆ.  ಸೂರ್ಯನಾರಾಯಣ ತನ್ನ ಮಡದಿ ಮಾನಸಿ, ಮಕ್ಕಳಾದ ಸುಧೀಂದ್ರ, ಸುಧೀಶ್ ಮೂವರಿಗೂ ವಿಷವಿಕ್ಕಿದ್ದಾನೆ. ನಂತರ ಬಡಿಗೆಯಿಂದ ತಲೆ ಹೊಡೆದು ಮೂವರನ್ನು ಕೊಲೆ ಮಾಡಿದ್ದಾನೆ. ಅವರು ಮೃತಪಟ್ಟ ತಕ್ಷಣ ಸೂರ್ಯನಾರಾಯಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಕಳೆದ ಐದು ವರ್ಷದಿಂದ ಕೊಲೆ ಆರೋಪಿಗೆ ಮಾನಸಿಕ ಸಮಸ್ಯೆ ಇತ್ತು ಎಂಬ ಮಾಹಿತಿ ಇದೆ. ಚಿಕಿತ್ಸೆ ಕೂಡ ಪಡೆಯುತ್ತಿದ್ದನು. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ಕೌಟುಂಬಿಕ ಕಲಹದ ಬಗ್ಗೆ ಕೆಲ ವರ್ಷಗಳ ಹಿಂದೆ ಪತ್ನಿಯಿಂದ ದೂರು ಬಂದಿತ್ತು ಎಂದರು.

ನವೆಂಬರ್ 26ರ ರಾತ್ರಿ ಘಟನೆ ನಡೆದಿದೆ. ಗೋಳಿಯಂಗಡಿಯ ಸುರ್ಗೋಳಿಯ ನಿರ್ಜನ ಪ್ರದೇಶದಲ್ಲಿ ಮನೆ ಇರುವುದರಿಂದ ಘಟನೆ ಯಾರಿಗೂ ಗಮನಕ್ಕೆ ಬಂದಿಲ್ಲ. ಮಕ್ಕಳು ಬುಧವಾರ ಶಾಲೆಗೆ ಹೊಗದಿರೋದನ್ನು ನೋಡಿ ಸೂರ್ಯನಾರಾಯಣನ ಸಹೋದರನಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ. ತಮ್ಮನ ಕರೆ ಸ್ವೀಕರಿಸದಿದ್ದಾಗ ಸಂಜೆಯ ವೇಳೆಗೆ ಮನೆ ಹತ್ತಿರ ಬಂದು ನೋಡಿದಾಗ ಊರಿಗೆ ಊರೇ ಬೆಚ್ಚಿಬಿದ್ದಿದೆ

SCROLL FOR NEXT