ಅಭಿಷೇಕ್ ಭಟ್ 
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ಮೈಸೂರು ವಿದ್ಯಾರ್ಥಿ ಗುಂಡೇಟಿಗೆ ಬಲಿ 

ಮೈಸೂರಿನ ಖ್ಯಾತ ಯೋಗ ಶಿಕ್ಷಕ ಸುದೇಶ್ ಚಾಂದ್ ಅವರ ಪುತ್ರ ಅಭಿಷೇಕ್ ಸುದೇಶ್ ಭಟ್ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.

ಮೈಸೂರು: ಮೈಸೂರಿನ ಖ್ಯಾತ ಯೋಗ ಶಿಕ್ಷಕ ಸುದೇಶ್ ಚಾಂದ್ ಅವರ ಪುತ್ರ ಅಭಿಷೇಕ್ ಸುದೇಶ್ ಭಟ್ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.

ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾನ್‌ ಬರ್ನಾರ್ಡ್‌ಡಿನೋ ಕಾಲೇಜಿನ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ, ಅಭಿಷೇಕ್‌ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದಾರೆ. 

ಘಟನೆ ಭಾರತೀಯ ಕಾಲಮಾನದ ಪ್ರಕಾರ ಶುಕ್ರವಾರ ಬೆಳಗಿನ ಜಾವ 2.30ರ ಸುಮಾರಿಗೆ ನಡೆದಿದೆ.

 ಮೈಸೂರು ಕುವೆಂಪು ನಗರ ನಿವಾಸಿ ಅಭಿಷೇಕ್‌ (25), ಮೈಸೂರಿನ ವಿದ್ಯಾವಿಕಾಸ್‌ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪದವಿ ಮುಗಿಸಿ, ಬಳಿಕ ಸ್ನಾತಕೋತ್ತರ ಅಧ್ಯಯನಕ್ಕಾಗಿ ಒಂದೂವರೆ ವರ್ಷದ ಹಿಂದೆ ಅಮೆರಿಕಕ್ಕೆ ತೆರಳಿದ್ದರು. 

ವಾರಾಂತ್ಯದಲ್ಲಿ ಅಭಿಷೇಕ್‌, ಕ್ಯಾಲಿಫೋರ್ನಿಯಾದ ಸನ್‌ ಬೆರ್ನಾರ್ಡಿನೋ ಹೋಟೆಲ್‌ನಲ್ಲಿ ಸಂಪಾದನೆಗಾಗಿ ರಿಸೆಪ್ಷನಿಸ್ಟ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲಿನ ಗ್ರಾಹಕನೊಬ್ಬ ಅಭಿಷೇಕ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.

ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಮೆರಿಕಾಗೆ ತೆರಳಿದ್ದರು. ಈ ವರ್ಷ ರಜೆಗೆ ತಮ್ಮ ಮಗ ಬರುತ್ತಾನೆಂದು ಕಾದಿದ್ದ ಪೋಷಕರಿಗೆ ಮಗನ ಸಾವಿನ ವಿಷಯ ಕೇಳಿ ಆಘಾತವಾಗಿದೆ. ಅಮೆರಿಕಾಗೆ ತೆರಳಲು ಮೃತ ವಿದ್ಯಾರ್ಥಿಯ ಪೋಷಕರು ಸಂಸದ ಪ್ರತಾಪ್ ಸಿಂಹ ಅವರ ಸಹಾಯ ಕೋರಿದ್ದಾರೆ, ಪ್ರತಾಪ್ ಸಿಂಹ ವಿದೇಶಾಂಗ ಇಲಾಖೆಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT