ಇದೇ ಮೊದಲ ಬಾರಿಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಸರಾ ಸಂಭ್ರಮ 
ರಾಜ್ಯ

ಇದೇ ಮೊದಲ ಬಾರಿಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಸರಾ ಸಂಭ್ರಮ

ನಾಡಿನೆಲ್ಲೆಡೆ ದಸರಾ ಹಬ್ಬಕ್ಕೆ ಅದ್ದೂರು ಚಾಲನೆ ದೊರೆತಿದ್ದು ಈ ನಡುವೆ ಇದೇ ಮೊದಲ ಬಾರಿಗೆ ನೃಪತುಂಗ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಜೋಡಿಸಲಾಗಿರುವ ನೂರಾರು ಗೊಂಬೆಗಳು ಇದೀಗ ನೋಡುಗರನ್ನು ಆಕರ್ಷಿಸುತ್ತಿದೆ. 

ಬೆಂಗಳೂರು: ನಾಡಿನೆಲ್ಲೆಡೆ ದಸರಾ ಹಬ್ಬಕ್ಕೆ ಅದ್ದೂರು ಚಾಲನೆ ದೊರೆತಿದ್ದು ಈ ನಡುವೆ ಇದೇ ಮೊದಲ ಬಾರಿಗೆ ನೃಪತುಂಗ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಜೋಡಿಸಲಾಗಿರುವ ನೂರಾರು ಗೊಂಬೆಗಳು ಇದೀಗ ನೋಡುಗರನ್ನು ಆಕರ್ಷಿಸುತ್ತಿದೆ. 

ಪೊಲೀಸ್ ಆಯುಕ್ತರ ಇಡೀ ಕಚೇರಿ ಆವರಣ ಮಾವಿನತೋರಣ, ಬಾಳೆಕಂಬ, ಅಲಂಕೃತ ವಿದ್ಯುತ್ ದೀಪಗಳಿಂಗ ಮಧವಣಗಿತ್ತಿಯಂತೆ ಸಿಂಗಾರಗೊಂಡಿದೆ. 

ಕಲಾವಿದ ಅರುಣ್ ಸಾಗರ್ ನೇತೃತ್ವದ ತಂಡ ಅತ್ಯಂತ ಸುಂದರವಾಗ ಅರಮನೆ ರೀತಿ ಶೃಂಗರಿಸಿ ಬಣ್ಣ-ಬಣ್ಣದ ವಿವಿಧ ಪುಷ್ಪಗಳಿಂದ ಅಲಂಕರಿಸಿ ಜಗಮಗಿಸುವ ದೀಪಾಲಂಕಾರ ನೋಡುಗರನ್ನು ಸೆಳೆಯುತ್ತಿದೆ. 

ಆಯುಕ್ತರ ಕಚೇರಿಯ ಪ್ರವೇಶ ದ್ವಾರದ ಎಡಭಾಗದಲ್ಲಿ ನಿರ್ಮಾಣ ಮಾಡಲಾಗಿರುವ ಸುಂದರವಾದ ವೇದಿಕೆಯಲ್ಲಿ ನಾನಾ ರೀತಿಯ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ. ಮೈಸೂರು ದಸರಾ ಇತಿಹಾಸ ಬಿಂಬಿಸುವ, ಜಂಬೂ ಸವಾರಿ, ಆನೆಗಳು, ಕುದುರೆಗಳು, ಆರಗಿನ ಅರಮನೆ, ಖಾಸಗಿ ದರ್ಬಾರ್, ದಶಾವತಾರ ಗೊಂಬೆಗಳು, ಹಳ್ಳಿ ಸೊಗಡು, ಮಹಾಭಾರತ, ಮಸೀದಿ, ಮದರ್ ತೆರೆಸಾ, ವಿಶ್ವದ ಹಾಸ್ಯ ಚಕ್ರವರ್ತಿ ಚಾರ್ಲಿ ಚಾಪ್ಲಿನ್, ದುರ್ಗೆ, ಸರಸ್ವತಿ, ಮಹಿಷಾಸುರ, ಗೌತಮ ಬುದ್ಧ, ಅಬ್ದುಲ್ ಕಲಾಂ, ಸ್ವಾಮಿ ವಿವೇಕಾನಂದ ಸೇರಿದಂತೆ ಸುಮಾರು 60ಕ್ಕೂ ಹೆಚ್ಚು ಮಾದರಿಯ ನೂರಾರು ಬೊಂಬೆಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. 

ತಮ್ಮ ದೂರು ಹೊತ್ತು ಅಧಿಕಾರಿಗಳನ್ನು ಭೇಟಿ ಮಾಡಲು ಬರುತ್ತಿದ್ದ ಸಾರ್ವಜನಿಕರು ದಸರಾ ಸಂಭ್ರಮಾಚರಣೆ ನೋಡಿ ಕಣ್ತುಂಬಿಕೊಂಡರು. ಪೊಲೀಸರು ತಮ್ಮ ಕುಟುಂಬದವರನ್ನು ಕರೆ ತಂದಿದ್ದು ಕೂಡ ಇಲ್ಲಿ ವಿಶೇಷವಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT