ರಾಜ್ಯ

ಚುನಾವಣಾ ಆಯೋಗದ ಮೇಲೆ ನಮಗೆ ವಿಶ್ವಾಸವಿಲ್ಲ: ಕಾಂಗ್ರೆಸ್

Shilpa D

ಬೆಂಗಳೂರು: ಚುನಾವಣಾ ಆಯೋಗ ಕೂಡಲೇ ಮಾದರಿ ನೀತಿ ಸಂಹಿತೆ ಜಾರಿಗೆ ತರಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಒಂದು ವೇಳೆ ಆಯೋಗ ವಿಫಲವಾದರೇ ರಾಜ್ಯದ್ಯಾಂತ ಉಗ್ರ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಂಸದ ನಾಸೀರ್ ಹುಸೇನ್,ಸೋಮವಾರ ಈ ಸಂಬಂಧ ದೂರು ದಾಖಲಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿ ಮಾಡದೇ ಡಿಸೆಂಬರ್ ನಲ್ಲಿ ನೀವು ಹೇಗೆ ಚುನಾವಣೆ ನಡೆಸುತ್ತೀರಾ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ, ನಮಗೆ  ಚುನಾವಣಾ ಆಯೋಗದ ಮೇಲೆ ನಂಬಿಕೆಯಿಲ್ಲ ಎಂದು ಹೇಳಿದ್ದಾರೆ.

ಇನ್ನು ಮಾಜಿ ಸಂಸದ ವಿಎಸ್ ಉಗ್ರಪ್ಪ  ಮಾತನಾಡಿ ಚುನಾವಣಾ ಆಯೋಗದ ಆದೇಶ ಪಾರದರ್ಶಕವಾಗಿಲ್ಲ ಎಂದು ತಿಳಿಸಿದ್ದಾರೆ,

SCROLL FOR NEXT