ಸಂಗ್ರಹ ಚಿತ್ರ 
ರಾಜ್ಯ

ಬಳ್ಳಾರಿ ವಿಭಜನೆ ವಿರೋಧಿಸುವವರು ಆಂಧ್ರದ ರೆಡ್ಡಿಗಳು: ಸಾಹಿತಿ ಕುಂ.ವೀ ಆಕ್ರೋಶ

ಅಭಿವೃದ್ಧಿ ನಿಮಿತ್ತ ಬಳ್ಳಾರಿ ಜಿಲ್ಲೆಯ ವಿಭಜನೆ ಉತ್ತಮ ನಿರ್ಣಯ. ಆದರೆ ಇದನ್ನು ಆಂಧ್ರದ ರೆಡ್ಡಿಗಳು ತಮ್ಮ ಸ್ವಾರ್ಥಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಸಾಹಿತಿ ಕುಂ ವೀರಭದ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸಪೇಟೆ: ಅಭಿವೃದ್ಧಿ ನಿಮಿತ್ತ ಬಳ್ಳಾರಿ ಜಿಲ್ಲೆಯ ವಿಭಜನೆ ಉತ್ತಮ ನಿರ್ಣಯ. ಆದರೆ ಇದನ್ನು ಆಂಧ್ರದ ರೆಡ್ಡಿಗಳು ತಮ್ಮ ಸ್ವಾರ್ಥಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಸಾಹಿತಿ ಕುಂ ವೀರಭದ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕೆಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಲೇಖಕ ಕುಂ.ವೀರಭದ್ರಪ್ಪ, 'ಬಳ್ಳಾರಿ ವಿಭಜನೆಯನ್ನು ವಿರೋಧಿಸುತ್ತಿರುವ ರೆಡ್ಡಿ ಸಹೋದರರು ಆಂಧ್ರದವರು. ವಿಭಜನೆಯಿಂದ ಜನಸಾಮಾನ್ಯರಿಗಾಗುವ ಪ್ರಯೋಜನವೇನೆಂದು ಅವರಿಗೆ ಗೊತ್ತಿಲ್ಲ. ಅಧಿಕಾರ ವಿಕೇಂದ್ರೀಕರಣಕ್ಕಾಗಿ ಆಂಧ್ರ ಮತ್ತು ತೆಲಂಗಾಣದಲ್ಲಿ ಚಿಕ್ಕ ಜಿಲ್ಲೆಗಳನ್ನು ಮಾಡಲಾಗುತ್ತಿದೆ. ಅಂತೆಯೇ ವಿಶಾಲವಾದ ಬಳ್ಳಾರಿಯನ್ನು ವಿಭಜಿಸುವುದರಲ್ಲಿ ತಪ್ಪಿಲ್ಲ ಎಂದು ಹೇಳಿದರು.

ಹೊಸ ಜಿಲ್ಲೆ ರಚನೆಗೆ ರೆಡ್ಡಿ ಸಹೋದರರು, ಆನಂದ್‌ ಸಿಂಗ್‌ ಮುಖ್ಯವಲ್ಲ. ಹೊಸ ಜಿಲ್ಲೆಗಾಗಿ ಜನ ದಶಕದಿಂದ ಹೋರಾಡುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಯಾರ ಒತ್ತಡಕ್ಕೂ ಮಣಿಯದೇ ಹೊಸ ಜಿಲ್ಲೆ ಘೋಷಿಸಬೇಕು. ವಿಜಯನಗರ ವ್ಯಾಪ್ತಿಗೆ ಬರಲಿರುವ ಪಶ್ಚಿಮ ತಾಲ್ಲೂಕುಗಳ ಪೈಕಿ ಕೆಲವು ಬಳ್ಳಾರಿಯಿಂದ 150 ಕಿ.ಮೀ.ಗೂ ಹೆಚ್ಚಿನ ದೂರದಲ್ಲಿವೆ. ಹೊಸಪೇಟೆ ಜಿಲ್ಲಾ ಕೇಂದ್ರವಾದರೆ ಅಂತರ ಕಡಿಮೆಯಾಗುತ್ತದೆ. ಹಂಪಿ, ತುಂಗಭದ್ರಾ ಜಲಾಶಯ, ವಿಮಾನ ನಿಲ್ದಾಣ ಸೌಲಭ್ಯವುಳ್ಳ ಹೊಸಪೇಟೆಗೆ ಜಿಲ್ಲಾ ಕೇಂದ್ರವಾಗಲು ಎಲ್ಲ ಅರ್ಹತೆಯಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT