ವಿಧಾನಸೌಧ 
ರಾಜ್ಯ

ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರು ಪರಿಗಣಿಸದಂತೆ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಮಾನ್ಯ ಮಾಡದೇ, ಪೂರ್ಣವಿಳಾಸ ಸಮರ್ಪಕ ದಾಖಲೆ ಇರುವ ದೂರುಗಳನ್ನು ಮಾತ್ರ ಪರಿಗಣಿಸಬೇಕೆಂದು ರಾಜ್ಯ ಸರ್ಕಾರದ  ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಮಾನ್ಯ ಮಾಡದೇ, ಪೂರ್ಣವಿಳಾಸ ಸಮರ್ಪಕ ದಾಖಲೆ ಇರುವ ದೂರುಗಳನ್ನು ಮಾತ್ರ ಪರಿಗಣಿಸಬೇಕೆಂದು ರಾಜ್ಯ ಸರ್ಕಾರದ  ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಅನಾಮಧೇಯ ದೂರುಗಳನ್ನು ಪರಿಗಣಿಸದಂತೆ ಸೆಪ್ಟೆಂಬರ್ ಮಾಹೆಯಲ್ಲಿ‌ ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸರ್ಕಾರ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.

ಅನಾಮಧೇಯ ದೂರುಗಳು ಕೆಲವು ಸಂದರ್ಭಗಳಲ್ಲಿ ದ್ವೇಷ, ಅಸೂಯೆ ಹಾಗೂ ಪೂರ್ವಾಗ್ರಹಪೀಡಿತವಾಗಿರುತ್ತವೆ. ಅಲ್ಲದೇ ದೂರುಗಳಿಗೆ ಸಂಬಂಧಿಸಿದ ಸಮರ್ಪಕ ದಾಖಲೆಗಳನ್ನು ಒದಗಿಸಿರುವುದಿಲ್ಲ. ಇಂತಹ ದೂರುಗಳಿಂದಾಗಿ ಸರ್ಕಾರಿ‌ ನೌಕರರ ದೈನಂದಿನ ಕೆಲಸ‌ಕಾರ್ಯಗಳಲ್ಲಿ ಹಸ್ತಕ್ಷೇಪವುಂಟಾಗುತ್ತದೆ.‌ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ನೌಕರರ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ. ಹೀಗಾಗಿ ಅವರು ಮುಕ್ತ‌ ಮತ್ತು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ವಿಜಯ್ ಭಾಸ್ಕರ್ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT