ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಡ್ರಾಪ್‌ ಕೊಡುವುದಾಗಿ ನಂಬಿಸಿ ದರೋಡೆ, 3 ಆರೋಪಿಗಳ ಬಂಧನ

 ಬಸ್‌ಗಾಗಿ ಕಾಯುತ್ತಿದ್ದವರಿಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕಾರಿಗೆ ಹತ್ತಿಸಿಕೊಂಡು ಚಾಕು, ನಕಲಿ ಗನ್ ತೋರಿಸಿ ಬೆದರಿಸಿ ನಗದು ಚಿನ್ನಾಭರಣಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದವರಿಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕಾರಿಗೆ ಹತ್ತಿಸಿಕೊಂಡು ಚಾಕು, ನಕಲಿ ಗನ್ ತೋರಿಸಿ ಬೆದರಿಸಿ ನಗದು ಚಿನ್ನಾಭರಣಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬ್ಯಾಟರಾಯನಪುರದ ಖದೀಮರಾದ ಸಲೀಂ ಪಾಷ, ಅಬ್ದುಲ್ ಸುಲೆಮಾನ್ ಮತ್ತು ರಾಜೇಶ್ ರಾಯ್‌ ಬಂಧಿತ ಆರೋಪಿಗಳು. ಅವರಿಂದ ಕೃತ್ಯಕ್ಕೆ ಬಳಸಿದ್ದ ಇಂಡಿಕಾ ಫಿಸ್ಟ್ ಕಾರು, ಚಾಕು, ನಕಲಿ ಗನ್, ಫೋನ್ ಮತ್ತು 14,600 ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಬೆಂಗಳೂರು ನಗರದ ಸಿದ್ದಾಪುರ, ಜಯನಗರ ಮತ್ತು ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ನಿನ್ನೆ ಮುಂಜಾನೆ ಕೆ.ಆರ್. ಪುರಂ ಸಮೀಪ ನಾಗರಾಜ್ ಅವರಿಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕಾರಿನಲ್ಲಿ ಅಪಹರಿಸಿದ್ದಾರೆ. ಬಿಡದಿಯ ಬೈರಮಂಗಲ ಚೆಕ್ ಪೋಸ್ಟ್ ಬಳಿ ಪೋಲೀಸರನ್ನು ಕಂಡ ನಾಗರಾಜ್ ಸಹಾಯಕ್ಕೆ ಕೂಗಿದ್ದಾರೆ. ಆಗ ಕರ್ತವ್ಯದಲ್ಲಿದ್ದ ಪೋಲೀಸರು ಕಾರನ್ನು ಬೆನ್ನಟ್ಟಿ ಸಿನಿಮೀಯ ರಿತಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಬಿಡದಿ ಹಾಗೂ ಸಂಪಿಗೆನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ರಾಮನಗರ ಜಿಲ್ಲಾ ಪೋಲೀಸ್ ವರಿಷ್ಟರು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

SCROLL FOR NEXT