ಸಚಿವ ಮಾಧುಸ್ವಾಮಿ 
ರಾಜ್ಯ

ಪರಿಹಾರ ಪಡೆಯೋಕೆ ಜನರೇ ಬರದಿದ್ದರೆ ನಾವೇನು ಮಾಡೋಣ: ಸಚಿವ ಮಾಧುಸ್ವಾಮಿ ಪ್ರಶ್ನೆ

ನೆರೆಪರಿಹಾರ ಪಡೆಯಲು ಸಂತ್ರಸ್ಥರೆ ಮುಂದೆ ಬರುತ್ತಿಲ್ಲ. ಜನರೇ ಮುಂದೆ ಬರದಿದ್ದರೆ ನಾವೇನು ಮಾಡುವುದಕ್ಕೆ ಆಗುತ್ತದೆ ಎಂದು ಸಚಿವ ಮಾಧುಸ್ವಾಮಿ ಸಂತ್ರಸ್ತರ ಮೇಲೆ ಗೂಬೆ ಕೂರಿಸಿದ್ದಾರೆ.

ತುಮಕೂರು: ನೆರೆಪರಿಹಾರ ಪಡೆಯಲು ಸಂತ್ರಸ್ಥರೆ ಮುಂದೆ ಬರುತ್ತಿಲ್ಲ. ಜನರೇ ಮುಂದೆ ಬರದಿದ್ದರೆ ನಾವೇನು ಮಾಡುವುದಕ್ಕೆ ಆಗುತ್ತದೆ ಎಂದು ಸಚಿವ ಮಾಧುಸ್ವಾಮಿ ಸಂತ್ರಸ್ತರ ಮೇಲೆ ಗೂಬೆ ಕೂರಿಸಿದ್ದಾರೆ.
  
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಕಟ್ಟಿಕೊಳ್ಳಲು ಒಂದು ಲಕ್ಷ ರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ತಾತ್ಕಾಲಿಕವಾಗಿ ಮನೆ ಕಟ್ಟಿಕೊಳ್ಳಲು 50 ಸಾವಿರ ಕೊಟ್ಟಿದ್ದೇವೆ. ಆದರೆ ಸೂಕ್ತ ದಾಖಲೆಗಳನ್ನು ಸಂತ್ರಸ್ಥರು ಸಲ್ಲಿಸದಿರುವ ಕಾರಣಪರಿಹಾರ ಹಂಚಿಕೆ ವಿಳಂಬವಾಗಿದೆ.ಸಂತ್ರಸ್ಥರೇ ಪರಿಹಾರ ಪಡೆಯಲು ಮುಂದೆ ಬರುತ್ತಿಲ್ಲ. ಯಾರಿಗೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸುವವರು ಜಿಲ್ಲಾಧಿಕಾರಿ, ತಹಶೀಲ್ದಾರ್,ವಿಭಾಗಾಧಿಕಾರಿ ಅವರನ್ನು ಭೇಟಿ ಮಾಡಿ ದಾಖಲೆಗಳನ್ನು ಸಲ್ಲಿಸಿ ಎಂದು ಕಾನೂನು ಸಚಿವ ಮಾಧುಸ್ವಾಮಿ ಅವರು ಹೇಳಿದ್ದಾರೆ.
  
ಕೇಮದ್ರ ಸರ್ಕಾರ ಈಗ ಮಧ್ಯಂತರ ಪರಿಹಾರ ಎಂದು ಹೇಳಿ 1200 ಕೋಟಿ ರೂ ಬಿಡುಗಡೆ ಮಾಡಿದೆ. ಕೇಂದ್ರದಿಂದ ಈ ಹಣವೇ ಅಂತಿಮ ಅಲ್ಲ.ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಹಾರಿದ ಅನುದಾನ ಬಿಡುಗಡೆಯಾಗಲಿದೆ ಬರಲಿದೆ ಎಂದು ಅವರು ತಿಳಿಸಿದರು.
  
ನಮ್ಮ ಸರ್ಕಾರದಿಂದ ಪರಿಹಾರಕ್ಕಾಗಿ ಕೇಂದ್ರಕ್ಕೆ ಮೋರೆ ಇಟ್ಟು ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸುತ್ತಿದ್ದೇವೆ .ಈಗಾಗಲೇ ಮೂರು ಸಾವಿರ ಕೋಟಿ ಖರ್ಚು ಮಾಡಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
  
ನೆರೆಪರಿಹಾರ ಕೊಡುವುದರ ಬಗ್ಗೆ ಮಾತನಾಡಿದ ಅವರು, ಮನೆ ಕಳೆದುಕೊಂಡ ಎಲ್ಲರ ಅಕೌಂಟ್​ಗೆ ಹಣ ಹಾಕಬೇಕೆಂದರೆ,ಯಾರೂ ಸಹ ಮುಂದೆ ಬರುತ್ತಿಲ್ಲ. ಇದುವರೆಗೂ 9 ಸಾವಿರ ಸಂತ್ರಸ್ಥರಷ್ಟೇ  ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದಾರೆ. ಸಮಸ್ಯೆ ಇರೋದು 40-80 ಸಾವಿರ ಮನೆಗಳಿಗೆ ಎಂದು ವರದಿ ಇದೆ. ಸಂತ್ರಸ್ಥರು ಡಿಸಿಗಳಿಗೆ ದಾಖಲೆಯೇ ಕೊಡುತ್ತಿಲ್ಲ. ಪರಿಹಾರ ಪಡೆದು ಮನೆ ಕಟ್ಟಿಕೊಳ್ಳಲು ಮುಂದಾಗುತ್ತಿಲ್ಲ. ಸರ್ಕಾರ ಎಲ್ಲೂ ವಿಫಲವಾಗಿಲ್ಲ ಎಂದು ಸಚಿವ ಮಾಧುಸ್ವಾಮಿ ಅವರು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT