ರೈತರಿಂದ ನಿನ್ನೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ತೀವ್ರ ಪ್ರತಿಭಟನೆ 
ರಾಜ್ಯ

ಲಕ್ಷ್ಮಣ ಸವದಿ ಹೇಳಿಕೆಗೆ ರೈತರ ತೀವ್ರ ವಿರೋಧ: 180 ರೂ ಸಂಗ್ರಹಿಸಿ ಉ.ಮು ಗಳಿಗೆ ಕಳುಹಿಸಿದ ರೈತರು!

ರೈತರ ಬೇಡಿಕೆಗಳಿಗೆ ಇತ್ತೀಚೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆಗೆ ಜನರಿಂದ ತೀವ್ರ ಟೀಕೆಗೆ ಗುರಿಯಾಗಬೇಕಾದ ಪ್ರಸಂಗ ಬಂದಿದೆ. 

ಬೆಳಗಾವಿ: ರೈತರ ಬೇಡಿಕೆಗಳಿಗೆ ಇತ್ತೀಚೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆ ಜನರಿಂದ ತೀವ್ರ ಟೀಕೆಗೆ ಗುರಿಯಾಗಬೇಕಾದ ಪ್ರಸಂಗ ಬಂದಿದೆ.


ಮೊನ್ನೆ ಬೆಳಗಾವಿಯಲ್ಲಿ ಸಕ್ಕರೆ ಬೆಳೆಗಾರರೊಬ್ಬರು 1 ಲಕ್ಷ  ಪರಿಹಾರ ಕೇಳಿದರು. ಆಗ ಉತ್ತರಿಸಿದ ಸವದಿ, ನನ್ನ 80 ಎಕರೆ ಸಕ್ಕರೆ ಬೆಳೆ ನಾಶವಾಗಿ ಹೋಗಿದೆ. ಅದರರ್ಥ ನಾನು 80 ಲಕ್ಷ ರೂಪಾಯಿ ಪರಿಹಾರ ಕೇಳಬೇಕು, ಅದು ಸಾಧ್ಯವಿಲ್ಲ ಅಲ್ಲವೇ ಎಂದು ಕೇಳಿದರು.


ಇದಕ್ಕೆ ನಿನ್ನೆ ವಿನೂತನ ಶೈಲಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರು 180 ರೂಪಾಯಿ ಸಂಗ್ರಹಿಸಿ ಲಕ್ಷ್ಮಣ ಸವದಿಯವರಿಗೆ ಕಳುಹಿಸಿದ್ದಾರೆ. ಸವದಿ ಅವರ ಹೇಳಿಕೆಯನ್ನು ಹಸಿರು ಸೇನೆ ತೀವ್ರವಾಗಿ ಖಂಡಿಸಿದ್ದು ಇತ್ತೀಚಿನ ನೆರೆ ಪ್ರವಾಹಕ್ಕೆ ತೀವ್ರ ಸಂಕಷ್ಟಕ್ಕೀಡಾದ ರೈತರಿಗೆ ಸರ್ಕಾರ ಸಂಪೂರ್ಣ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.


ರೈತ ಮುಖಂಡ ಚುನ್ನಪ್ಪ ಪೂಜಾರಿ ಮಾತನಾಡಿ, ಕಬ್ಬು ಬೆಳೆಗಾರರಿಗೆ ಸರ್ಕಾರ ಪ್ರತಿ ಎಕರೆಗೆ ಕೇವಲ 12 ಸಾವಿರ ರೂಪಾಯಿ ಪರಿಹಾರ ನಿಗದಿಪಡಿಸಿದೆ. ಬೇರೆ ಬೆಳೆಗಳಿಗೆ 9 ಸಾವಿರ ರೂಪಾಯಿ ಪರಿಹಾರ ನಿಗದಿಪಡಿಸಿದೆ. ಸಂಪೂರ್ಣ ಪರಿಹಾರ ನೀಡಿದರೆ ಮಾತ್ರ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಲು ಸಾಧ್ಯ ಎಂದು ಹೇಳಿದರು.


ಮತ್ತೊಬ್ಬ ರೈತ ನಾಯಕಿ ಜಯಶ್ರೀ ಗುರುನ್ನವರ್, ಸವದಿಯವರು ತಾವು ಚುನಾವಣೆ ವೇಳೆ ಅಫಿಡವಿಟ್ಟು ಸಲ್ಲಿಸುವಾಗ 44 ಎಕರೆ ಜಮೀನು ಹೊಂದಿರುವುದಾಗಿ ಪ್ರಸ್ತಾಪಿಸಿದ್ದರು. ಆದರೆ ಮೊನ್ನೆ ಶುಕ್ರವಾರ ತಾನು 80 ಎಕರೆ ಜಮೀನು ಹೊಂದಿರುವುದಾಗಿ ಹೇಳಿದ್ದಾರೆ. ಅವರಿಗೆ ರೈತರಿಗೆ ಸಹಾಯ ಮಾಡಲು ಸಾಧ್ಯವಾಗುವುದಿಲ್ಲ ಎಂದಾದರೆ ಉಪ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲಿ ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT