ಶಸ್ತ್ರಾಸ್ತ್ರಗಳಿಗೆ ಯಧುವೀರ್ ಪೂಜೆ 
ರಾಜ್ಯ

ನಾಡಿನಾದ್ಯಂತ ಸಡಗರ,ಸಂಭ್ರಮದಿಂದ ಆಯುಧ ಪೂಜೆ ಆಚರಣೆ

:ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ  ಆಯುಧ ಪೂಜೆ ಹಾಗೂ ಸರಸ್ವತಿ ಪೂಜೆ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ

ಬೆಂಗಳೂರು:ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ  ಆಯುಧ ಪೂಜೆ ಹಾಗೂ ಸರಸ್ವತಿ ಪೂಜೆ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ಶಕ್ತಿ ದೇವತೆಗಳಾದ ಸರಸ್ವತಿ, ಲಕ್ಷ್ಮಿ ಹಾಗೂ ಪಾರ್ವತಿ ದೇವಿಯನ್ನು ಪೂಜೆಸಲಾಗುತ್ತಿದೆ. ಯಂತ್ರಗಳು, ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ಮೈಸೂರಿನ ಅರಮನೆ ಮೈದಾನದೊಳದೆ ರಾಜಮನೆತನದಿಂದ ಆಯಧ ಪೂಜೆಯನ್ನು ಆಚರಿಸಲಾಗುತ್ತಿದೆ. 

ಆಯುಧ ಪೂಜೆಗೆ ಐತಿಹಾಸಿಕ ದಂತಕಥೆವಿದೆ. ದುರ್ಗಾ ದೇವಿಯು ಚಾಮುಂಡೇಶ್ವರಿಯ ರೂಪ ತಾಳಿ ಮಹಿಷಾಸುರನನ್ನು ಸಂಹರಿಸಿದ ಸಂದರ್ಭದಲ್ಲಿ ದೇವಿ ಉಪಯೋಗಿಸಿದ ಆಯುಧಗಳನ್ನು ಮತ್ತೆ ಬಳಸದೆ ಬಿಸಾಡಿದಳು. ಆ ಆಯುಧಗಳನ್ನು ನಂತರ ಪೂಜೆಸಲಾಯಿತು. ಹಾಗಾಗಿಯೇ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ ಎಂಬ ಕಥೆ ಪುರಾಣಗಳಲ್ಲಿ ಉಲ್ಲೇಖವಾಗಿದೆ. 

ಆಯುಧ ಪೂಜೆಯ ಹಿಂದೆ ಪೌರಾಣಿಕ ಮಹತ್ವವಿದೆ. ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ, ಅಜ್ಞಾತವಾಸದ ಸಮಯದಲ್ಲಿ ಬನ್ನಿಗಿಡದಲ್ಲಿ ಬಚ್ಚಿಟ್ಟಿದ್ದ ತಮ್ಮ ಶಸ್ತ್ರಾಸ್ತ್ರಗಳನೆಲ್ಲ ತೆಗೆದು  ಶತ್ರುಗಳ ವಿರುದ್ಧ ಪಾಂಡವರು ವಿಜಯವನ್ನು ಸಾಧಿಸುತ್ತಾರೆ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಸಾಧಿಸಿದ ವಿಜಯದ ಕುರುಹಾಗಿ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!